ಕೊಪ್ಪಳ: ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಟಾರ್ಗೆಟ್ ಆಗಿದ್ದಾರೆ. ಅವರನ್ನು ಸೋಲಿಸಲೇಬೇಕೆಂದು ಪಣ ತೊಟ್ಟಿದ್ದಾರೆ. ಇಂದು ನಳೀನ್ ಕುಮಾರ್ ಕಟೀಲು ಕೂಡ ಅದನ್ನೇ ಹೇಳಿದ್ದಾರೆ. ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ರಾಜಕೀಯ ನಿರುದ್ಯೋಗಿಯಾಗಲಿದ್ದಾರೆ. ಅವರು ಎಲ್ಲಿಯೇ ನಿಂತರು ಅವರನ್ನು ಸೋಲಿಸುತ್ತೇವೆ ಎಂದಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರ ಸಿಗುತ್ತಿಲ್ಲ. ಅವರುಗೆ ಸ್ವತಂತ್ರ ಕ್ಷೇತ್ರ ಸಿಗುತ್ತಿಲ್ಲ. ಪರಿಸ್ಥಿತಿ ಈ ರೀತಿ ಇರುವಾಗ ಅವರ ಪಕ್ಷ ಅಧಿಕಾರಕ್ಕೆ ಬರುವುದಾದರೂ ಹೇಗೆ..? ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಿದರೆ ಕಾಂಗ್ರೆಸ್ ನವರೇ ಅವರನ್ನು ಅಲ್ಲಿ ಸೋಲಿಸುತ್ತಾರೆ. ಬೇರೆ ಯಾವುದೇ ಕ್ಷೇತ್ರದಲ್ಲಿ ನಿಂತರೂ ನಾವೇ ಸೋಲಿಸುತ್ತೇವೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ರಾಜಕೀಯ ಬಿಟ್ಟು ಭವಿಷ್ಯ ಹೇಳುವುದು ಒಳ್ಳೆಯದು. ಪ್ರಧಾನಿ ಮೋದಿಯವರು ಅಪ್ಪನಾಣೆಗೂ ಪಿಎಂ ಆಗಲ್ಲ ಅಂದಿದ್ರು ಒಂದು ಅಲ ಅಲ್ಲ ಎರಡು ಬಾರಿ ಪ್ರಧಾನಿಯಾಗಿದ್ದಾರೆ. ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಲ್ಲ ಅಂದಿದ್ರು ಅವರು ಸಿಎಂ ಆದರು. ಹೀಗಾಗಿ ಅವರು ಹೇಳುವುದು ಯಾವುದು ನಡೆಯುವುದಿಲ್ಲ ಎಂದರು.
ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…
ಬೆಂಗಳೂರು; ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಿಗೆ ದೊಡ್ಡ ಕನಸಿರುತ್ತದೆ. ಪೋಷಕರ ಆಸೆಯಂತೆ ಮಕ್ಕಳು ನಡೆದುಕೊಳ್ಳುವುದು ಸಾಮಾನ್ಯ. ಬಾಹ್ಯಾಕಾಶದಲ್ಲಿ ಆಸಕ್ತಿ ಹೊಂದಿರುವ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…