Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮುಸ್ಲಿಂ ಸ್ಪೀಕರ್ ಮುಂದೆ ನಮಸ್ಕಾರ್ ಸಾಬ್ ಅನ್ನಬೇಕು : ಜಮೀರ್ ಅಹಮದ್

---Advertisement---

 

ತೆಲಂಗಾಣ: ನವೆಂಬರ್ 30ರಂದು ತೆಲಂಗಾಣ ವಿಧಾನಸಭಾ ಚುನಾವಣೆ ನಡೆಯಲಿದೆ. ಇದರ ಪ್ರಚಾರ ಕಾರ್ಯದಲ್ಲಿ ಕರ್ನಾಟಕದ ಸಚಿವ ಜಮೀರ್ ಅಹ್ಮದ್ ತೊಡಗಿದ್ದಾರೆ. ಕಾಂಗ್ರೆಸ್ ಗೆಲುವಿಗಾಗಿ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಜನರನ್ನುದ್ದೇಶಿಸಿ ಮಾತನಾಡುವಾಗಲೇ ಯಡವಟ್ಟಿನ ಹೇಳಿಕೆ ನೀಡಿದ್ದಾರೆ.

ಮುಸ್ಲಿಂ ಸ್ಪೀಕರ್ ಎದುರು ನಮಸ್ಕಾರ್ ಸಾಬ್ ಎಂದು ನಿಂತುಕೊಳ್ಳಬೇಕು. ಒಳ್ಳೊಳ್ಳೆಯ ಬಿಜೆಪಿ ಶಾಸಕರೂ ಹೀಗೆ ನಿಲ್ಲುವಂತೆ ಕಾಂಗ್ರೆಸ್ ಮಾಡಿದೆ. ಕಾಂಗ್ರೆಸ್ ನಲ್ಲಿ ನಾವೂ 9 ಜನ ಮುಸ್ಲಿಂರು ಗೆದ್ದಿದ್ದೇವೆ. ಒಂಭತ್ತು ಜನರಲ್ಲಿ ಐದು ಮಂದಿಗೆ ಅಧಿಕಾರ ಸಿಕ್ಕಿದೆ. ನನ್ನನ್ನು ಸಚಿವನನ್ನಾಗಿ ಮಾಡಿದೆ. ಸಲೀಂ ಅಹಮದ್​ಗೆ ಚೀಫ್ ವಿಪ್ ನೀಡಲಾಗಿದೆ. ನಜೀರ್ ಅಹಮದ್​ಗೆ ಸಿಎಂ ಪೊಲಿಟಿಕಲ್ ಸೆಕ್ರೆಟರಿ ಮಾಡಲಾಗಿದೆ ಎಂದಿದ್ದಾರೆ.

 

ರಾಜ್ಯದ ಇತಿಹಾಸದಲ್ಲಿ ಎಂದೂ ಮುಸ್ಲೀಮರು ಸ್ಪೀಕರ್ ಆಗಿರಲಿಲ್ಲ. ಯುಟಿ ಖಾದರ್ ಅವರನ್ನು ಸ್ಪೀಕರ್ ಮಾಡಲಾಗಿದೆ. ಪರಿಣಾಮ ಒಳ್ಳೊಳ್ಳೆಯ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎಂದು ಕೈಮುಗಿದು ನಿಂತ್ಕೋಬೇಕು ಎಂದಿದ್ದಾರೆ. ತೆಲಂಗಾಣದ ಪ್ರಚಾರದ ನಡುವಲ್ಲಿ ಈ ರೀತಿಯಾದ ಹೇಳಿಕೆ ನೀಡಿದ್ದು, ಹಲವರ ಕೆಂಗಣ್ಣಿಗೆ ಗುರಿಯಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment