ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕರ್ನಾಟಕದಲ್ಲಿರುವ ನಾಲ್ಕು ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ವಿಮಾನ ನಿಲ್ದಾಣಗಳಿಗೆ ಗಣ್ಯ ವ್ಯಕ್ತಿಗಳ ಹೆಸರಿಡಲು ಯೋಜಿಸಿದೆ. ಈ ಸಂಬಂಧ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮನವಿಯನ್ನು ಸಲ್ಲಿಸಿದೆ. ವಿಜಯಪುರ, ಹುಬ್ನಳ್ಳ, ಶಿವಮೊಗ್ಗ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಗಣ್ಯರ ಹೆಸರುಗಳನ್ನಿಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಈ ವಿಮಾನ ನಿಲ್ದಾಣಗಳಿಗೆ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ, ಕಿತ್ತೂರು ರಾಣಿ ಚನ್ನಮ್ಮ ವಿಮಾನ ನಿಲ್ದಾಣ, ರಾಷ್ಟ್ರಕವಿ ಡಾ.ಕೆ.ವಿ.ಪುಟ್ಟಪ್ಪ ವಿಮಾನ ನಿಲ್ದಾಣ ಎಂದು ಮರು ನಾಮಕರಣ ಮಾಡಲಿದ್ದಾರೆ. ಈ ಸಂಬಂಧ ಸಂಸತ್ತಿನಲ್ಲಿ ನಡೆತುತ್ತಿರುವ ಅಧಿವೇಶನದಲ್ಲಿ ಲೋಕಸಭೆಯಲ್ಲಿ ವಿಮಾನ ನಿಲ್ದಾಣಗಳ ಉದ್ದೇಶಿತ ನಾಮಕರಣದ ಕುರಿತು ಪ್ರಶ್ನೆಗೆ ಉತ್ತರಿಸಿದ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರುಳೀಧರ್ ಮೊಹೋಲ್, ಅಸ್ತಿತ್ವದಲ್ಲಿರುವ ಮತ್ತು ಮುಂಬರುವ ವಿಮಾನ ನಿಲ್ದಾಣಗಳಿಗೆ ಹೆಸರುಗಳನ್ನು ಪ್ರಸ್ತಾಪಿಸಿದ ಹತ್ತು ರಾಜ್ಯಗಳ ವಿವರಗಳನ್ನು ನೀಡಿದ್ದಾರೆ.
2023ರ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲದ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವೂ ಹುಬ್ಬಳ್ಳಿ-ಧಾರವಾಡ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಮತ್ತು ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಕಿತ್ತೂರು ಚೆನ್ನಮ್ಮ ಎಂದು ಹೆಸರಿಡಲು ಪ್ರಸ್ತಾವನೆಯನ್ನು ಪರಿಗಣಿಸುವುದಾಗಿ ತಿಳಿಸಿತ್ತು. ವಿಮಾನ ನಿಲ್ದಾಣವನ್ನು ಹೆಸರಿಸುವ ಅಧಿಕಾರವನ್ನು ನಾಗರಿಕ ವಿಮಾನಯಾನ ಸಚಿವಾಲಾಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹೊಂದಿದ್ದು, ರಾಜ್ಯಗಳು ಅದರ ಬಗ್ಗೆ ರಾಜ್ಯ ಶಾಸಕಾಂಗದ ನಿರ್ಣಯಗಳ ರೂಪದಲ್ಲಿ ಪ್ರಸ್ತಾವನೆಯನ್ನು ಕಳುಹಿಸಬಹುದು ಎಂದು ಎಂಬಿ ಪಾಟೀಲ್ ಅವರು ತಿಳಿಸಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್