Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರನ್ಯಾ ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಘಟಾನುಘಟಿ ಸಚಿವರ ಹೆಸರು : ಬಿವೈ ವಿಜಯೇಂದ್ರ ಹೇಳಿದ್ದೇನು..?

---Advertisement---

ಬೆಂಗಳೂರು; ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಒಬ್ಬ ಹಿರಿಯ ಐಪಿಎಸ್ ಅಧಿಕಾರಿಯ ಮಗಳು ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಅರೆಸ್ಟ್ ಆಗಿದ್ದಾರೆ. ಈಗ ಬರ್ತಾ ಇರುವಂತ ಮಾಹಿತಿಯನ್ನ ನೋಡೋದಾದ್ರೆ ರನ್ಯಾ ರಾವ್ ಅವರ ಹಿಂದೆ ಅನೇಕ ಘಟಾನುಘಟಿಗಳು ಇದ್ದಾರೆ ಎಂಬ ಅಂಶ ಹೊರಗೆ ಬರ್ತಿದೆ ಎಂದು ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ರನ್ಯಾ ರಾವ್ ಅವರು ಕಳೆದ ಕೆಲವು ತಿಂಗಳಲ್ಲಿ ಮೂವತ್ತಕ್ಕೂ ಹೆಚ್ಚು ಸಲ ವಿದೇಶಕ್ಕೆ ಹೋಗಿ ಬಂದಿದ್ದಾರೆ. ಸಂಪೂರ್ಣವಾದ ಪ್ರೋಟೋಕಾಲ್ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸರೇ ಎಸ್ಕಾರ್ಟ್ ಮಾಡಿ ವಿಮಾನ ನಿಲ್ದಾಣದಿಂದ ಕರೆದುಕೊಂಡು ಹೋಗ್ತಾ ಇದ್ರು. ಅಂದ್ರೆ ಆಕೆ ಸಾಮಾನ್ಯ ಮಹಿಳೆಯಲ್ಲ ಅನ್ನೋದು ಇದರಲ್ಲಿಯೇ ಅರ್ಥವಾಗುತ್ತದೆ. ಏರ್ಪೋರ್ಟ್ ನಲ್ಲಿಯೇ ಚೆಕ್ ಮಾಡಲ್ಲ ಎಂದಾಗ ಇದರ ಹಿಂದೆ ಘಟಾನುಘಟಿ ಸಚಿವರಿದ್ದಾರೆ ಎಂಬ ಮಾಹಿತಿ ಹೊರಗೆ ಬರ್ತಾ ಇದೆ.

ನಾನು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲ ಮಾಡ್ತ ಇಲ್ಲ. ನಾನೊಬ್ಬ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ. ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡ್ತಾ ಇಲ್ಲ. ಅದರ ಹಿಂದೆ ಯಾವ ಸಚಿವರಿದ್ದಾರೆ ಅನ್ನೋದನ್ನ ತಿಳಿಸಬೇಕು. ಇಂಥ ವ್ಯಕ್ತಿಗಳಿಗೆ ಬೆಂಬಲ ನೀಡಿರುವ ರಾಜಕಾರಣಿಗಳು ಯಾರು ಎಂಬುದು ಮುಖ್ಯಮಂತ್ರಿ ಗಮನಕ್ಕೆ ಬಂದಿದ್ದರೆ, ಅವರು ಆದಷ್ಟು ಬೇಗ ಬಹಿರಂಗ ಪಡಿಸಬೇಕೆಂದು ಆಗ್ರಹ ಮಾಡುತ್ತೇವೆ. ಇದೊಂದು ಗಂಭೀರವಾದ ಪ್ರಕರಣ ಆಗಿರೋ ಕಾರಣ ಯಾರ್ಯಾರ ಕೈವಾಡವಿದೆ ಎಂಬುದನ್ನು ತಿಳಿಸಬೇಕು. ಗೋಲ್ಡ್ ಸ್ಮಗ್ಲಿಂಗ್ ಮಾಫಿಯಾ, ಹವಾಲಾ ಹೀಗೆ ಹಲವು ವಿಚಾರಗಳಿಗೆ ಬೆಂಬಲ ನೀಡಿದವರ ಹೆಸರನ್ನ ಬಹಿರಂಗ ಪಡಿಸಲೇ ಬೇಕೆಂದು ಈ ಮೂಲಕ ತಿಳಿಸುತ್ತೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...