ರನ್ಯಾ ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಘಟಾನುಘಟಿ ಸಚಿವರ ಹೆಸರು : ಬಿವೈ ವಿಜಯೇಂದ್ರ ಹೇಳಿದ್ದೇನು..?

ಬೆಂಗಳೂರು; ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಒಬ್ಬ ಹಿರಿಯ ಐಪಿಎಸ್ ಅಧಿಕಾರಿಯ ಮಗಳು ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಅರೆಸ್ಟ್ ಆಗಿದ್ದಾರೆ. ಈಗ ಬರ್ತಾ ಇರುವಂತ ಮಾಹಿತಿಯನ್ನ ನೋಡೋದಾದ್ರೆ ರನ್ಯಾ ರಾವ್ ಅವರ ಹಿಂದೆ ಅನೇಕ ಘಟಾನುಘಟಿಗಳು ಇದ್ದಾರೆ ಎಂಬ ಅಂಶ ಹೊರಗೆ ಬರ್ತಿದೆ ಎಂದು ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ರನ್ಯಾ ರಾವ್ ಅವರು ಕಳೆದ ಕೆಲವು ತಿಂಗಳಲ್ಲಿ ಮೂವತ್ತಕ್ಕೂ ಹೆಚ್ಚು ಸಲ ವಿದೇಶಕ್ಕೆ ಹೋಗಿ ಬಂದಿದ್ದಾರೆ. ಸಂಪೂರ್ಣವಾದ ಪ್ರೋಟೋಕಾಲ್ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸರೇ ಎಸ್ಕಾರ್ಟ್ ಮಾಡಿ ವಿಮಾನ ನಿಲ್ದಾಣದಿಂದ ಕರೆದುಕೊಂಡು ಹೋಗ್ತಾ ಇದ್ರು. ಅಂದ್ರೆ ಆಕೆ ಸಾಮಾನ್ಯ ಮಹಿಳೆಯಲ್ಲ ಅನ್ನೋದು ಇದರಲ್ಲಿಯೇ ಅರ್ಥವಾಗುತ್ತದೆ. ಏರ್ಪೋರ್ಟ್ ನಲ್ಲಿಯೇ ಚೆಕ್ ಮಾಡಲ್ಲ ಎಂದಾಗ ಇದರ ಹಿಂದೆ ಘಟಾನುಘಟಿ ಸಚಿವರಿದ್ದಾರೆ ಎಂಬ ಮಾಹಿತಿ ಹೊರಗೆ ಬರ್ತಾ ಇದೆ.

ನಾನು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲ ಮಾಡ್ತ ಇಲ್ಲ. ನಾನೊಬ್ಬ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ. ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡ್ತಾ ಇಲ್ಲ. ಅದರ ಹಿಂದೆ ಯಾವ ಸಚಿವರಿದ್ದಾರೆ ಅನ್ನೋದನ್ನ ತಿಳಿಸಬೇಕು. ಇಂಥ ವ್ಯಕ್ತಿಗಳಿಗೆ ಬೆಂಬಲ ನೀಡಿರುವ ರಾಜಕಾರಣಿಗಳು ಯಾರು ಎಂಬುದು ಮುಖ್ಯಮಂತ್ರಿ ಗಮನಕ್ಕೆ ಬಂದಿದ್ದರೆ, ಅವರು ಆದಷ್ಟು ಬೇಗ ಬಹಿರಂಗ ಪಡಿಸಬೇಕೆಂದು ಆಗ್ರಹ ಮಾಡುತ್ತೇವೆ. ಇದೊಂದು ಗಂಭೀರವಾದ ಪ್ರಕರಣ ಆಗಿರೋ ಕಾರಣ ಯಾರ್ಯಾರ ಕೈವಾಡವಿದೆ ಎಂಬುದನ್ನು ತಿಳಿಸಬೇಕು. ಗೋಲ್ಡ್ ಸ್ಮಗ್ಲಿಂಗ್ ಮಾಫಿಯಾ, ಹವಾಲಾ ಹೀಗೆ ಹಲವು ವಿಚಾರಗಳಿಗೆ ಬೆಂಬಲ ನೀಡಿದವರ ಹೆಸರನ್ನ ಬಹಿರಂಗ ಪಡಿಸಲೇ ಬೇಕೆಂದು ಈ ಮೂಲಕ ತಿಳಿಸುತ್ತೇನೆ ಎಂದಿದ್ದಾರೆ.

suddionenews

Recent Posts

ಸೋಮಶೇಖರ್, ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆಗೊಳ್ಳುತ್ತಾರಾ..?

ಹುಬ್ಬಳ್ಳಿ; ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಬಿಜೆಪಿ ಪಕ್ಷದಲ್ಲಿಯೇ ಇದ್ರು ಕೂಡ ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೆ…

33 minutes ago

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

  ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 15 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ಮಾರ್ಚ್. 15 ) ಹತ್ತಿ ಮಾರುಕಟ್ಟೆ…

2 hours ago

ಚಿತ್ರದುರ್ಗ ಪಿಎಸ್ಐ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ ಆರೋಪ

  ಚಿತ್ರದುರ್ಗ; ನಗರ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮೇಲೆ ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ…

3 hours ago

ರುದ್ರಪ್ಪ ಲಮಾಣಿ ದಿಢೀರನೇ ಬೆಂಗಳೂರಿಗೆ ಶಿಫ್ಟ್

  ಬೆಂಗಳೂರು; ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಈಗಾಗಲೇ…

3 hours ago

ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ

ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ, ಈ ರಾಶಿಯವರು ಸೋಲಿಲ್ಲದ ಸರದಾರನಾಗಿ ಮುಟ್ಟಿದ್ದೆಲ್ಲ ಚಿನ್ನ. ಶನಿವಾರದ ರಾಶಿ ಭವಿಷ್ಯ…

10 hours ago

ಹಿರಿಯೂರು ಬಳಿ ಉಪ ಸಭಾಪತಿಗೆ ಬೈಕ್ ಡಿಕ್ಕಿ : ಪ್ರಾಣಾಪಾಯದಿಂದ ಪಾರು

ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…

19 hours ago