ಬೆಂಗಳೂರು; ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಒಬ್ಬ ಹಿರಿಯ ಐಪಿಎಸ್ ಅಧಿಕಾರಿಯ ಮಗಳು ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಅರೆಸ್ಟ್ ಆಗಿದ್ದಾರೆ. ಈಗ ಬರ್ತಾ ಇರುವಂತ ಮಾಹಿತಿಯನ್ನ ನೋಡೋದಾದ್ರೆ ರನ್ಯಾ ರಾವ್ ಅವರ ಹಿಂದೆ ಅನೇಕ ಘಟಾನುಘಟಿಗಳು ಇದ್ದಾರೆ ಎಂಬ ಅಂಶ ಹೊರಗೆ ಬರ್ತಿದೆ ಎಂದು ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ರನ್ಯಾ ರಾವ್ ಅವರು ಕಳೆದ ಕೆಲವು ತಿಂಗಳಲ್ಲಿ ಮೂವತ್ತಕ್ಕೂ ಹೆಚ್ಚು ಸಲ ವಿದೇಶಕ್ಕೆ ಹೋಗಿ ಬಂದಿದ್ದಾರೆ. ಸಂಪೂರ್ಣವಾದ ಪ್ರೋಟೋಕಾಲ್ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸರೇ ಎಸ್ಕಾರ್ಟ್ ಮಾಡಿ ವಿಮಾನ ನಿಲ್ದಾಣದಿಂದ ಕರೆದುಕೊಂಡು ಹೋಗ್ತಾ ಇದ್ರು. ಅಂದ್ರೆ ಆಕೆ ಸಾಮಾನ್ಯ ಮಹಿಳೆಯಲ್ಲ ಅನ್ನೋದು ಇದರಲ್ಲಿಯೇ ಅರ್ಥವಾಗುತ್ತದೆ. ಏರ್ಪೋರ್ಟ್ ನಲ್ಲಿಯೇ ಚೆಕ್ ಮಾಡಲ್ಲ ಎಂದಾಗ ಇದರ ಹಿಂದೆ ಘಟಾನುಘಟಿ ಸಚಿವರಿದ್ದಾರೆ ಎಂಬ ಮಾಹಿತಿ ಹೊರಗೆ ಬರ್ತಾ ಇದೆ.
ನಾನು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲ ಮಾಡ್ತ ಇಲ್ಲ. ನಾನೊಬ್ಬ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ. ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡ್ತಾ ಇಲ್ಲ. ಅದರ ಹಿಂದೆ ಯಾವ ಸಚಿವರಿದ್ದಾರೆ ಅನ್ನೋದನ್ನ ತಿಳಿಸಬೇಕು. ಇಂಥ ವ್ಯಕ್ತಿಗಳಿಗೆ ಬೆಂಬಲ ನೀಡಿರುವ ರಾಜಕಾರಣಿಗಳು ಯಾರು ಎಂಬುದು ಮುಖ್ಯಮಂತ್ರಿ ಗಮನಕ್ಕೆ ಬಂದಿದ್ದರೆ, ಅವರು ಆದಷ್ಟು ಬೇಗ ಬಹಿರಂಗ ಪಡಿಸಬೇಕೆಂದು ಆಗ್ರಹ ಮಾಡುತ್ತೇವೆ. ಇದೊಂದು ಗಂಭೀರವಾದ ಪ್ರಕರಣ ಆಗಿರೋ ಕಾರಣ ಯಾರ್ಯಾರ ಕೈವಾಡವಿದೆ ಎಂಬುದನ್ನು ತಿಳಿಸಬೇಕು. ಗೋಲ್ಡ್ ಸ್ಮಗ್ಲಿಂಗ್ ಮಾಫಿಯಾ, ಹವಾಲಾ ಹೀಗೆ ಹಲವು ವಿಚಾರಗಳಿಗೆ ಬೆಂಬಲ ನೀಡಿದವರ ಹೆಸರನ್ನ ಬಹಿರಂಗ ಪಡಿಸಲೇ ಬೇಕೆಂದು ಈ ಮೂಲಕ ತಿಳಿಸುತ್ತೇನೆ ಎಂದಿದ್ದಾರೆ.
ಈ ರಾಶಿಯವರು ಹೊಸದಾಗಿ ವ್ಯಾಪಾರ ಪ್ರಾರಂಭ ಮಾಡಿದ್ದಾರೆ ಕೈಹಿಡಿದರೆ ಸಾಕು, ಈ ರಾಶಿಯವರು ಮದುವೆಯಾಗಿ ತಿಂಗಳಾಯಿತು ಕಲಹಗಳು ಶುರು, ಮಂಗಳವಾರದ…
ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…
ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…
ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…
ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…