ನಂದಮೂರಿ ತಾರಕರತ್ನ Health update ; ಆರೋಗ್ಯ ಸ್ಥಿರ, ಮುಂದುವರಿದ ಚಿಕಿತ್ಸೆ

ಬೆಂಗಳೂರು : ನಟ ನಂದಮೂರಿ ತಾರಕರತ್ನ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 48 ಗಂಟೆಗಳ ತಪಾಸಣೆ (Observation) ಮುಗಿದಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸೋಮವಾರ ಮಧ್ಯಾಹ್ನದ ನಂತರ ತಾರಕರತ್ನ ಆರೋಗ್ಯ ಸ್ಥಿತಿ ಕುರಿತು ಆಸ್ಪತ್ರೆಯ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ.

ಕುಂಪ್ಪಂ ನಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನಂತರ ಅವರನ್ನು ಬೆಂಗಳೂರಿನ
ನಾರಾಯಣ ಹೃದಯಾಲಯದ ವೈದ್ಯರ ತಂಡವು ಚಿಕಿತ್ಸೆ ಮುಂದುವರೆಸಿದೆ. ಆದರೆ, ಇಂದಿನ ವೈದ್ಯಕೀಯ ಪರೀಕ್ಷೆಗಳು ನಿರ್ಣಾಯಕ. ಅವರು ಇಂದು ಎಂಆರ್‌ಐ (MRI) ಸ್ಕ್ಯಾನ್ ಮಾಡಲಿದ್ದಾರೆ. ಇದರ ಆಧಾರದ ಮೇಲೆ ಚಿಕಿತ್ಸೆಯನ್ನು ಮುಂದುವರಿಸಲಾಗುವುದು.

ಆರೋಗ್ಯ ಸಚಿವ ಸುಧಾಕರ್ ಅವರು ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿ ತಾರಕರತ್ನ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದರು. ಅವರ ಹೃದಯ ಬಡಿತ ಸಾಮಾನ್ಯವಾಗಿದೆ ಆದರೆ ಅವರ ಮೆದುಳಿನ ಕಾರ್ಯವು ಸರಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಹೃದಯಾಘಾತವಾದ ನಂತರ 30 ನಿಮಿಷಗಳ ಕಾಲ ರಕ್ತ ಸಂಚಾರ ಸ್ಥಗಿತಗೊಂಡಿದ್ದರಿಂದ ಮೆದುಳಿನ ಕಾರ್ಯಚಟುವಟಿಕೆಗೆ ತೊಂದರೆಯಾಗಿರುವುದು ಪರೀಕ್ಷೆಗಳ ಮೂಲಕ ಪತ್ತೆಯಾಗಿದೆ ಎಂದರು.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago