Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಂದಿನಿ ಹಾಲಿನ ದರ ಏರಿಕೆ ; ರೈತರ ಪಾಲಿಗೆಷ್ಟು..? ಸರ್ಕಾರದ ಲಾಭವೆಷ್ಟು..?

---Advertisement---

ಕರ್ನಾಟಕದಲ್ಲಿ ಹಾಲಿನ ದರ ಹೆಚ್ಚಳವಾಗ್ತಾನೆ ಇದೆ. ಇದು ಗ್ರಾಹಕರಿಗೆ ದೊಡ್ಡ ತಲೆನೋವಾಗಿದೆ. ಹಾಲಿನ ದರ ಏರಿಕೆಯ ಪ್ರಸ್ತಾಪಕ್ಕೆ ಸಿಎಂ ಸಿದ್ದರಾಮಯ್ಯ ಸಂಪುಟ ಒಪ್ಒಇಗೆ ಸೂಚಿಸಿದೆ. ನಾಲ್ಕು ರೂಪಾಯಿ ಏರಿಕೆಯನ್ನು ಮಾಡಲಾಗಿದೆ. ಇದನ್ನು ಸಿಎಂ ಸಿದ್ದರಾಮಯ್ಯ ಅವರು ಸಮರ್ಥನೆ ಮಾಡಿಕೊಂಡಿದ್ದಾರೆ. ಈಗ ಏರಿಕೆ ಮಾಡಿರುವಂತ ಹಣ ರೈತರಿಗೆ ನೇರವಾಗಿ ಹೋಗುತ್ತದೆ ಎಂಬ ಮಾತು ಹೇಳಲಾಗಿದೆ. ಹಾಗಾದ್ರೆ ಈಗ ಏರಿಕೆಯಾಗಿರುವ ಬೆಲೆಯಲ್ಲಿ ರೈತರಿಗೆ ನೇರವಾಗಿ ಹೋಗುವುದು ಎಷ್ಟು ಎಂಬ ಮಾಹಿತಿ ಇಲ್ಲಿದೆ.

ಕೋಲಾರ ಹಾಲು ಮತ್ತು ರೇಷ್ಮೆ ಉತ್ಪಾದನೆಯಲ್ಲಿ ರಾಜ್ಯದಲ್ಲಿಯೇ ಹೆಸರು ಪಡೆದಿರುವ ಜಿಲ್ಲೆ ಇದಾಗಿದೆ. ಕಿಒಲಾರ ಜಿಲ್ಲೆ ಹೈನ್ಯೋದ್ಯಮದಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಜಿಲ್ಲೆಯಲ್ಲಿಯೇ ಲಕ್ಷಾಂತರ ಕುಟುಂಬಗಳು ಹೈನ್ಯೋದ್ಯಮ ನಂಬಿ ಜೀವನ ನಡೆಸುತ್ತಿವೆ. ರೈತರಿಗೆ ಹಾಲಿಗೆ ನೀಡಬೇಕಿದ್ದ ಸಹಾಯಧನ ಬಿಡುಗಡೆ ಮಾಡಲು ಇಲ್ಲದ ಆಸಕ್ತಿ ಸರ್ಕಾರಕ್ಕೆ ಹಾಲಿನ ದರ ಏರಿಕೆಯಲ್ಲಿ ಇದೆ ಎಂಬುದು ರೈತರು ಹಾಗೂ ಗ್ರಾಹಕರ ಆರೋಪವಾಗಿದೆ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ.

 

ಕೋಲಾರ ಹಾಲು ಒಕ್ಕೂಟ ಕಳೆದ ಒಂದು ವಾರದ ಹಿಂದೆ ರೈತರಿಗೆ ಎರಡು ರೂಪಾಯಿ ಹಾಲಿನ ಖರೀದಿ ದರ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರುಗೆ 32.20 ಸಿಗುತ್ತಿದೆ. ಈಗ ಹಾಲಿನ ದರ 4 ರೂಪಾಯಿ ಏರಿಕೆ ಮಾಡಿದ್ದು, ಈ ದರವನ್ನು ನೇರವಾಗಿ ರೈತರಿಗೆ ಕೊಟ್ಟರು ರೈತರಿಗೆ ಲೀಟರ್ ಹಾಲಿಗೆ ಸಿಗುವುದು ಕೇವಲ 36.20 ರೂಪಾಯಿ. ಆದರೆ ಗ್ರಾಹಕರಿಗೆ ಮಾರಾಟ ಮಾಡುವುದು 64 ರೂಪಾಯಿ. ಹಾಗಾಗಿ ಸರ್ಕಾರ ಒಂದು ಲೀಟರ್ ಹಾಲಿನ ಮೇಲೆ 30 ರೂಪಾಯಿ ಲಾಭ ಪಡೆಯುತ್ತದೆ ಎಂಬುದು ಹಾಲು ಉತ್ಪಾದಕರ ಅಭಿಪ್ರಾಯವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment