Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಂದಿನಿ ಹಾಲಿನ ದರ ಮತ್ತೆ ಏರಿಕೆ : ಪ್ರತಿ ಲೀ.2 ರೂ ಜಾಸ್ತಿ.. 50ML ಹಾಲು ಕೂಡ ಹೆಚ್ಚಳ

Facebook
Twitter
Telegram
WhatsApp

 

ಬೆಂಗಳೂರು: ಈಗಾಗಲೇ ನಂದಿನಿ ಹಲಿನ ದರವನ್ನು ಹೆಚ್ಚಳ ಮಾಡಿಕೊಂಡಿದೆ. ಇದೀಗ ಮತ್ತೆ ಪ್ರತಿ ಲೀಟರ್ ಹಾಲಿನ ದರವನ್ನು 2 ರೂಪಾಯಿ ಹೆಚ್ಚಳ ಮಾಡಿದೆ. ಈ ಸಂಬಂಧ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಹಾಲು ಮಂಡಳಿ ಹಾಲು ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಭಾರತದಲ್ಲಿ ಮೊದಲ ಸ್ಥಾನ. 98 ಲಕ್ಷ 17 ಸಾವಿರ ಲೀ ಸಂಗ್ರಹ ಆಗ್ತಿದೆ. ಸದ್ಯದಲ್ಲಿ ಒಂದು ಕೋಟಿ ಸಂಗ್ರಹ ಗುರಿ ಮುಟ್ಟಲಿದೆ. ಇದು ದಾಖಲೆ. ರಾಜ್ಯದ 27 ಲಕ್ಷಹಾಲು ಉತ್ಪಾದಕರು ಇದಕ್ಕೆ ಕಾರಣ. ಸದ್ಯದ ಶೇಖರಣೆಯಲ್ಲಿ 30 ಲಕ್ಷ ಪೌಡರ್ ಗೆ ಕಳುಹಿಸುತ್ತಿದ್ದೇವೆ. ಇದರಲ್ಲಿ ನಮ್ಮ ಬಂಡವಾಳ ಸ್ವಲ್ಪ ಡೆಡ್ ಆಗ್ತಿದೆ. 72 ಲಕ್ಷ ಹಾಲು ಉತ್ಪಾದಕರು ಗ್ರಾಹಕರಿಗೆ ತೊಂದರೆಯಾಗಬಾರದು.

ಇಬ್ಬರು ಕೂಡ ನಮಗೆ ಎರಡು ಕಣ್ಣಿದ್ದಾಗೆ. ಲೀ ಗೆ ಸದ್ಯ ಗ್ರಾಹಕರಿಗೆ 42 ರೂ ಇದೆ. ಪ್ರತೀ ಹಾಲಿನ ಪ್ಯಾಕೆಟ್ ನಲ್ಲು 50ml ಜಾಸ್ತಿ ಹಾಲು ಇರಲಿದೆ. ಈ ಮೂಲಕ ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲು 550 ml ಇರಲಿದೆ. ನಾಳೆಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಸಾವಿರ ಎಂಎಲ್ ಬರ್ತಿದ್ದ ಹಾಲು ಇನ್ಮೇಲೆ ಸಾವಿರದ ಐವತ್ತು ಎಂಎಲ್ ಗೆ ಏರಿಕೆಯಗಿದೆ.

ಹಾಲಿನ‌ ಹೊಸ ದರ ಇಂತಿದೆ:

ನೀಲಿ ಪ್ಯಾಕೆಟ್ ಹಾಲು 42 ರಿಂದ 44 ರೂ
ನೀಲಿ ಪ್ಯಾಕೆಟ್ (ಟೋನ್ಡ್ ಹಾಲು) 43 ರಿಂದ 45ರೂ
ಆರೆಂಜ್ ಪ್ಯಾಕೆಟ್ ಹಾಲು 46ರಿಂದ 48 ರೂ
ಆರೆಂಜ್ ಸ್ಪೆಷಲ್ ಹಾಲು 48 ರಿಂದ 50 ರೂ
ಶುಭಂ ಹಾಲು 48ರಿಂದ 50 ರೂ
ಸಮೃದ್ದಿ ಹಾಲು 51ರಿಂದ 53ರೂ
ಶುಭಂ (ಟೋನ್ಡ್ ಹಾಲು) 49ರಿಂದ 51ರೂ
ಸಂತೃಪ್ತಿ ಹಾಲು 55 ರಿಂದ 57 ರೂ
ಶುಭಂ ಗೋಲ್ಡ್ ಹಾಲು 49ರಿಂದ 51ರೂ
ಶುಭಂ ಡಬಲ್ ಟೋನ್ಡ್ ಹಾಲು 41 ರಿಂದ 43 ರೂ ಗೆ ಏರಿಕೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ 7 ದಿನಗಳ ಕಾಲ ಭರ್ಜರಿ ಮಳೆ : ಶಿವಮೊಗ್ಗ, ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಮುಂದುವರೆದಿದೆ. ರಾಜ್ಯದ ಹಲವೆಡೆ ಮಳೆರಾಯ ಬಿಟ್ಟು ಬಿಡದೆ ಕಾಡುತ್ತಿದ್ದಾನೆ. ರಾಜ್ಯದಲ್ಲಿ ಇನ್ನೂ 7 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಜೋರಾಗುವ

ಸರ್ಕಾರದ ಜವಾಬ್ದಾರಿ ಯುವಕರ ಕಡೆಗಿದೆ, ಚರ್ಚೆಗೆ ಸಿದ್ದ : ನೀಟ್ ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ಮಾತು

    ದೆಹಲಿ: ಕಳೆದ ವಾರವಷ್ಟೇ ನೀಟ್ ಪರೀಕ್ಷೆ ದಿನಾಂಕ ಮುಂದೂಡಿಕೆಯಾಗಿತ್ತು. ವಿದ್ಯಾರ್ಥಿಗಳೆಲ್ಲ ಪರೀಕ್ಷೆಗೆ ಸಿದ್ಧವಾಗಿ, ಪರೀಕ್ಷಾ ಕೇಂದ್ರಕ್ಕೂ ಪ್ರಯಾಣ ಬೆಳೆಸಿದ್ದರು‌. ಆದರೆ ರಾತ್ರಿ 10 ಗಂಟೆಯ ಸುಮಾರಿಗೆ ಪರೀಕ್ಷೆ ರದ್ದಾದ ಮಾಹಿತಿಯನ್ನು ಕೇಂದ್ರ

ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯಗೆ ಮೀಟರ್ ಬಡ್ಡಿ ದಂಧೆಕೋರರ ಕಾಟ : ಪೊಲೀಸ್ ಠಾಣೆಗೆ ದೂರು..!

  ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ಇವರದ್ದು. ರಕ್ಷಿತ್ ಶೆಟ್ಟಿ ಅಭಿನಯದ ಕಿರಿಕ್ ಪಾರ್ಟಿ, ಅವನೇ

error: Content is protected !!