Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಂದಿನಿ ಹಾಲಿನ ದರ ಮತ್ತೆ ಏರಿಕೆ : ಪ್ರತಿ ಲೀ.2 ರೂ ಜಾಸ್ತಿ.. 50ML ಹಾಲು ಕೂಡ ಹೆಚ್ಚಳ

---Advertisement---

 

ಬೆಂಗಳೂರು: ಈಗಾಗಲೇ ನಂದಿನಿ ಹಲಿನ ದರವನ್ನು ಹೆಚ್ಚಳ ಮಾಡಿಕೊಂಡಿದೆ. ಇದೀಗ ಮತ್ತೆ ಪ್ರತಿ ಲೀಟರ್ ಹಾಲಿನ ದರವನ್ನು 2 ರೂಪಾಯಿ ಹೆಚ್ಚಳ ಮಾಡಿದೆ. ಈ ಸಂಬಂಧ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಹಾಲು ಮಂಡಳಿ ಹಾಲು ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಭಾರತದಲ್ಲಿ ಮೊದಲ ಸ್ಥಾನ. 98 ಲಕ್ಷ 17 ಸಾವಿರ ಲೀ ಸಂಗ್ರಹ ಆಗ್ತಿದೆ. ಸದ್ಯದಲ್ಲಿ ಒಂದು ಕೋಟಿ ಸಂಗ್ರಹ ಗುರಿ ಮುಟ್ಟಲಿದೆ. ಇದು ದಾಖಲೆ. ರಾಜ್ಯದ 27 ಲಕ್ಷಹಾಲು ಉತ್ಪಾದಕರು ಇದಕ್ಕೆ ಕಾರಣ. ಸದ್ಯದ ಶೇಖರಣೆಯಲ್ಲಿ 30 ಲಕ್ಷ ಪೌಡರ್ ಗೆ ಕಳುಹಿಸುತ್ತಿದ್ದೇವೆ. ಇದರಲ್ಲಿ ನಮ್ಮ ಬಂಡವಾಳ ಸ್ವಲ್ಪ ಡೆಡ್ ಆಗ್ತಿದೆ. 72 ಲಕ್ಷ ಹಾಲು ಉತ್ಪಾದಕರು ಗ್ರಾಹಕರಿಗೆ ತೊಂದರೆಯಾಗಬಾರದು.

ಇಬ್ಬರು ಕೂಡ ನಮಗೆ ಎರಡು ಕಣ್ಣಿದ್ದಾಗೆ. ಲೀ ಗೆ ಸದ್ಯ ಗ್ರಾಹಕರಿಗೆ 42 ರೂ ಇದೆ. ಪ್ರತೀ ಹಾಲಿನ ಪ್ಯಾಕೆಟ್ ನಲ್ಲು 50ml ಜಾಸ್ತಿ ಹಾಲು ಇರಲಿದೆ. ಈ ಮೂಲಕ ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲು 550 ml ಇರಲಿದೆ. ನಾಳೆಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಸಾವಿರ ಎಂಎಲ್ ಬರ್ತಿದ್ದ ಹಾಲು ಇನ್ಮೇಲೆ ಸಾವಿರದ ಐವತ್ತು ಎಂಎಲ್ ಗೆ ಏರಿಕೆಯಗಿದೆ.

ಹಾಲಿನ‌ ಹೊಸ ದರ ಇಂತಿದೆ:

ನೀಲಿ ಪ್ಯಾಕೆಟ್ ಹಾಲು 42 ರಿಂದ 44 ರೂ
ನೀಲಿ ಪ್ಯಾಕೆಟ್ (ಟೋನ್ಡ್ ಹಾಲು) 43 ರಿಂದ 45ರೂ
ಆರೆಂಜ್ ಪ್ಯಾಕೆಟ್ ಹಾಲು 46ರಿಂದ 48 ರೂ
ಆರೆಂಜ್ ಸ್ಪೆಷಲ್ ಹಾಲು 48 ರಿಂದ 50 ರೂ
ಶುಭಂ ಹಾಲು 48ರಿಂದ 50 ರೂ
ಸಮೃದ್ದಿ ಹಾಲು 51ರಿಂದ 53ರೂ
ಶುಭಂ (ಟೋನ್ಡ್ ಹಾಲು) 49ರಿಂದ 51ರೂ
ಸಂತೃಪ್ತಿ ಹಾಲು 55 ರಿಂದ 57 ರೂ
ಶುಭಂ ಗೋಲ್ಡ್ ಹಾಲು 49ರಿಂದ 51ರೂ
ಶುಭಂ ಡಬಲ್ ಟೋನ್ಡ್ ಹಾಲು 41 ರಿಂದ 43 ರೂ ಗೆ ಏರಿಕೆ

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment