Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಂದಿನಿ ಹಾಲಿನ ದರ : ಒಂದಲ್ಲ, ಎರಡಲ್ಲ ಬರೋಬ್ಬರಿ 5 ರೂಪಾಯಿ ಏರಿಕೆ ಸಾಧ್ಯತೆ..!

---Advertisement---

 

ಈಗಾಗಲೇ ನಂದಿನಿ ಹಾಲಿನ ದರ ಒಂದೇ ಸಮನೆ ಏರಿಕೆಯಾಗಿದೆ. ಈಗ ಮತ್ತೆ ಹಾಲಿನ ದರವನ್ನು ಏರಿಕೆ ಮಾಡುವ ಪ್ಲ್ಯಾನ್ ಇದೆ ಎಂದು ಶಾಸಕ ಕೆ.ವೈ. ನಂಜೇಗೌಡ ಅವರು ಸುಳಿವು ನೀಡಿದ್ದಾರೆ. ನಂಜೇಗೌಡ ಅವರು ಕೋಲಾರ ಹಾಲು ಒಲ್ಕೂಟದ ಅಧ್ಯಕ್ಷರು ಕೂಡ ಆಗಿದ್ದಾರೆ. ಈ ಬಗ್ಗೆ ಮಾತನಾಡಿರುವ ನಂಜೇಗೌಡ ಅವರು, ಶೀಘ್ರದಲ್ಲಿಯೇ ನಂದಿನಿ ಹಾಲಿನ ದರವನ್ನು ಏರಿಸಲಾಗುವುದು‌. ಐದು ರೂಪಾಯಿ ಏರಿಕೆ ಮಾಡಲು ಯೋಜನೆ ನಡೆದಿದ್ದು, ಆ ಹಣವನ್ನು ನೇರವಾಗಿ ರೈತರಿಗೆ ನೀಡಬೇಕೆಂದು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ನಂದಿನಿ ಹಾಲಿನಿ ದರ ಹೆಚ್ಚಿಸುವ ಬಗ್ಗೆ ಕೆಲವು ದಿನಗಳ ಹಿಂದಿನಿಂದಲೇ ಚರ್ಚೆ ನಡೆಯುತ್ತಿದೆ. ಬೆಳಗಾವಿ ಅಧಿವೇಶನದ ಬಳಿಕ ಹೆಚ್ಚಳ ಮಾಡುವ ಸಾಧ್ಯತೆಯಿದೆ ಎನ್ನುವ ಮಾತುಗಳು ಈಗಾಗಲೇ ಜೋರಾಗಿ ಕೇಳಿಬರುತ್ತಿವೆ. ಇದರಿಂದ ಗ್ರಾಹಕರಿಗೆ ದೊಡ್ಡ ಹೊಡೆತ ಬಿದ್ದಂತೆ ಆಗುತ್ತದೆ. ಮೊದಲೇ ರಾಜ್ಯದಲ್ಲಿ ವಿಪರೀತ ಮಳೆಯಿಂದಾಗಿ ಸಾಕಷ್ಟು ಬೆಳೆ ನಷ್ಟವಾಗಿ, ತರಕಾರಿ, ಕಾಳುಗಳ ಬೆಲೆ ಗಗನಕ್ಕೇರಿದೆ. ಇದರ ನಡುವೆ ಹೀಗೆ ಹಾಲಿನ ದರವೂ ಏರಿಕೆಯಾದರೆ ಜನಸಾಮಾನ್ಯರ ಕಥೆ ಏನು..?

ಪೆಟ್ರೋಲ್, ಡಿಸೇಲ್, ಎಣ್ಣೆ, ಕಾಳು ಕಡಿ, ಚಿನ್ನ ಬೆಳ್ಳಿಯೂ ಸಮಾಧಾನಕರವಾದ ಬೆಲೆಗೆ ಇಳಿಯುತ್ತಿಲ್ಲ. ಒಂದೇ ಸಮನೇ ಏರಿಕೆಯಾಗುತ್ತಲೆ ಇರುವ ಮಧ್ಯಮವರ್ಗದ ಜನರ ಪರಿಸ್ಥಿತಿ ಹೇಳುವಂತೆ ಇಲ್ಲ. ದುಡಿದ ಹಣವೆಲ್ಲ ಬರೀ ಲೈಫ್ ಲೀಡ್ ಮಾಡುವುದಕ್ಕೇನೆ ಕಳೆದೋಗುತ್ತಿದೆ. ಮುಂದಿನ ಜೀವನಕ್ಕೆ ಉಳಿಸುವುದಕ್ಕೂ ಕಷ್ಟ ಎಂದು ಬೇಸರ ಹೊರ ಹಾಕುತ್ತಿದ್ದಾರೆ. ಅದರಲ್ಲೂ ಐದು ರೂಪಾಯಿ ಏರಿಕೆ ಮಾಡಿದರೆ ಮಧ್ಯಮ ವರ್ಗದವರಿಗೆ ಹೊರೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...