ಬೆಂಗಳೂರು; ನಂದಿನಿ ಹಾಲಿನ ದರ ಪದೇ ಪದೇ ಏರಿಕೆಯಾಗುತ್ತಿರುವುದು ಗ್ರಾಹಕರಿಗೆ ತಲೆ ಬಿಸಿಯಾಗಿದೆ. ಒಮ್ಮೆ ಹಾಲನ್ನು ಹೆಚ್ಚು ಮಾಡಿ ದರವನ್ನು ಹೆಚ್ಚಳ ಮಾಡಿದ್ರು. ಈಗ ಮತ್ತೆ ದರ ಏರಿಕೆಗೆ ಸಚಿವ ಸಂಪುಟ ಅಸ್ತು ಎಂದಿದ್ದು, ಹಾಲನ್ನು ಖರೀದಸಬೇಕಾ..? ಬೇಡ್ವಾ ಎನ್ನುವ ಚಿಂತೆ ಗ್ರಾಹಕರದ್ದಾಗಿದೆ. ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಲು ಸಚುವ ಸಂಪುಟ ಒಪ್ಪಿಗೆ ನೀಡಿದೆ. ಹಾಲು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯ ಅವರ ಮುಂದೆ ಹತ್ತು ರೂಪಾಯಿ ಹೆಚ್ಚಳಕ್ಕೆ ಮನವಿ ಮಾಡಿದ್ದರು. ಆದರೆ ಸಚಿವ ಸಂಪುಟದಲ್ಲಿ 4 ರೂಪಾಗಿ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದೆ.
ಒಂದೇ ವರ್ಷದಲ್ಲಿ ಹಾಲಿನ ದರ ಎರಡು ಬಾರಿ ಏರಿಕೆಯಾದಂತೆ ಆಗಿದೆ. ಕಳೆದ ತಿಂಗಳು ಫೆಬ್ರವರಿಯಲ್ಲಷ್ಟೇ ಪ್ರತಿ ಲೀಟರ್ ಹಾಲಿನ ಬೆಲೆ 2 ರೂಪಾಯಿ ಏರಿಕೆಯಾಗಿತ್ತು. ಈಗ ನೋಡಿದ್ರೆ ನಾಲ್ಕು ರೂಪಾಯಿ ಏರಿಕೆಯಾಗಿದೆ. ರೈತರಿಂದ ಹಾಲಿನ ದರ ಹೆಚ್ಚಳದ ಮನವಿ ಬಂದಿದ್ದ ಕಾರಣ ಒಕ್ಕೂಟಗಳು ಸಿಎಂ ಸಿದ್ದರಾಮಯ್ಯ ಅವರ ಬಳಿ ದರ ಏರಿಕೆಗೆ ಮನವಿ ಮಾಡಿದ್ದವು.
ರೈತರು ಹಾಗೂ ಹಾಲು ಒಕ್ಕೂಟಗಳ ಒತ್ತಡದಿಂದ ನಂದಿನಿ ಉತ್ಪನ್ನಗಳ ದರ ಏರಿಕೆಯ ಪ್ರಸ್ತಾಪ ಕೇಳಿಬಂದಿತ್ತು. ಅಧಿವೇಶನ ಮುಗಿಯುತ್ತಿದ್ದಂತೆಯೇ ದರ ಏರಿಕೆ ಆಗಲಿದೆ ಎಂಬೆಲ್ಲಾ ಮಾತುಗಳು ಹರಿದಾಡಿದ್ದವು. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಿರಲಿಲ್ಲ. ಬದಲಿಗೆ ದರ ಹೆಚ್ಚಳದ ಸಾಧಕ, ಭಾದಕಗಳ ಬಗ್ಗೆ ಚರ್ಚೆ ನಡೆದಿದ್ದು, ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವುದಾಗಿ ಸಿಎಂ ಹೇಳಿದ್ದರು. ಈಗ ಸಂಪುಟದ ಒಪ್ಪಿಗೆ ಪಡೆದು ದರ ಏರಿಕೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಹೃದಯ ಭಾಗದಲ್ಲಿರುವ ಬಿ.ಡಿ. ರಸ್ತೆಯ ಎಸ್.ಬಿ.ಐ. ಬ್ಯಾಂಕ್ ಸಮೀಪ, ಶಾರ್ಟ್ ಸರ್ಕ್ಯೂಟ್…
ಬೆಂಗಳೂರು; ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಜೈಲು ವಾಸ ಅನಿಭವಿಸುತ್ತಿದ್ದಾರೆ. ಇದರ ನಡುವೆ ತನಿಖೆಯು ನಡೆಯುತ್ತಿದ್ದು, ಗೌರವ…
ಧಾರವಾಡ; ಇಲ್ಲಿನ ಹನುಮಕೊಪ್ಪ ಗೊಂಬೆಗಳು ಭವಿಷ್ಯ ನುಡಿದಿವೆ. ಯುಗಾದಿ ಹಬ್ಬದಂದು ಇಲ್ಲಿನ ಗೊಂಬೆಗಳ ಬಳಿ ಭವಿಷ್ಯ ಕೇಳುವ ಪ್ರತೀತಿ ಇದೆ.…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಬ್ಯಾಂಕ್ ಕಾಲೋನಿ ವಾಸಿ ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಮೂಲದ ನಿವೈತ್ತ ಶಿಕ್ಷಕ…
ಇಂದು ಯುಗಾದಿ ಹಬ್ಬ. ಹಿಂದೂಗಳ ಹೊಸ ವರ್ಷಾರಂಭ. ಮರ ಗಿಡಗಳು ಹಳೆ ಎಲೆಗಳನ್ನ ಉದುರಿಸಿ ಹೊಸ ಚಿಗುರನ್ನ ಹೊತ್ತು, ಸುಂದರವಾಗಿ…
ಈ ರಾಶಿಯವರಿಗೆ ಮದುವೆ ಸಂಭ್ರಮ, ಆರ್ಥಿಕ ಅಭಿವೃದ್ಧಿ, ಕೆಲಸ ಬದಲಾವಣೆ, ವಿದೇಶ ಯೋಗ, ಆಟದಲ್ಲಿ ಗೆಲವು, ಭಾನುವಾರದ ರಾಶಿ ಭವಿಷ್ಯ…