Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನ ರೋಟರಿ ಸಂಸ್ಥೆಗಳಿಂದ ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪಡೆದ ಶಿಕ್ಷಕ ಕೆ.ಟಿ. ನಾಗಭೂಷಣ್

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.09 :  ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪದ ಸರ್ಕಾರಿ ಪ್ರೌಢಶಾಲೆ ರೇಖಲಗೆರೆ ಲಂಬಾಣಿಹಟ್ಟಿ ಯ ವಿಜ್ಞಾನ ಶಿಕ್ಷಕ ಕೆ. ಟಿ ನಾಗಭೂಷಣ್  ಅವರಿಗೆ ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರಿನ ಚಾಮರಾಜ ಪೇಟೆಯ ಅಭಿನವ್ ವಿಹಾರ ಭವನದಲ್ಲಿ ಅಕ್ಟೋಬರ್ 08 ರಂದು ನಡೆದ ಇಂಟರ್ ನ್ಯಾಷನಲ್ ರೋಟರಿಯ 20 ರೋಟರಿ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಇತ್ತೀಚಿಗಷ್ಟೇ ಕರ್ನಾಟಕ ರಾಜ್ಯ ಸರ್ಕಾರದಿಂದ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಾಗಿದ್ದ ಇವರನ್ನು ಬೆಂಗಳೂರಿನ ರೋಟರಿ ಇಂಟರ್ ನ್ಯಾಷನಲ್  ಸಂಸ್ಥೆಯು ಇವರ ಪ್ರಾಮಾಣಿಕ ಹಾಗೂ ಸೃಜನಾತ್ಮಕ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ 2023 ನೇ ವರ್ಷದ ರಾಷ್ಟ್ರ ನಿರ್ಮಾತೃ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ MLC ಪುಟ್ಟಣ್ಣ ಹಾಗೂ ನಿವೃತ್ತ ಗವರ್ನರ್ ಆದ ಉದಯ ಕುಮಾರ್ ಭಾಸ್ಕರ್, ಶಿಕ್ಷಣ ಇಲಾಖೆಯ ಹಿರಿಯ ಕಾರ್ಯಕ್ರಮ ಅಧಿಕಾರಿ ಶ್ರಿ ರಮೇಶ್ ಸರ್ ಹಾಗೂ ಚಲನ ಚಿತ್ರ ನಟ ಜೆ.ಬಿ.ರೆಡ್ಡಿ ,ರೋಟರಿ ಸಂಸ್ಥೆಯ ಅಧ್ಯಕ್ಷರು ಹಾಗೂ ಮುಂತಾದ ಗಣ್ಯರಿಂದ ಪ್ರಶಸ್ತಿಯನ್ನು ಸ್ವೀಕರಿಸಲಾಯಿತು.

ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತಂದ ನಾಗಭೂಷಣ್ ರವರನ್ನು ಜಿಲ್ಲೆಯ ಉಪನಿರ್ದೇಶಕ  ರವಿಶಂಕರ ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಕೆ.ಎಸ್, ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್, ಎಸ್ ಡಿ ಎಂ ಸಿ ಅಧ್ಯಕ್ಷ ಜಯಣ್ಣ, ಉಪಾಧ್ಯಕ್ಷ ಯಾದು ನಾಯ್ಕ, ಶಾಲಾ ಸಿಬ್ಬಂದಿ, ಊರಿನ ಗ್ರಾಮಸ್ಥರು, ಯುವಕರು,ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!