Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವದೆಹಲಿಯಲ್ಲಿ ಡಿಸೆಂಬರ್ 7 ರಿಂದ 10ರವರೆಗೆ ರಾಷ್ಟ್ರೀಯ ಸಮಾವೇಶ :ಪ್ರೇಮ ಶ್ರೀ ಜೋಡಿದಾರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ. (ನ. 06) :  ಚಿತ್ರದುರ್ಗದಲ್ಲಿ ಕಳೆದ ಎರಡು ದಿನಗಳಿಂದ ನಡೆದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ಕರ್ನಾಟಕ ದಕ್ಷಿಣ ಪ್ರಾಂತದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮೂರು ಕರಡು ನಿರ್ಣಯಗಳನ್ನು ತೆಗೆದುಕೊಂಡಿದ್ದು, ಅದರ ಜಾರಿಗೆ ಹೋರಾಟವನ್ನು ಮಾಡಲಾಗುವುದು ಎಂದು ಕರ್ನಾಟಕ ದಕ್ಷಿಣ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಕುಮಾರಿ ಪ್ರೇಮ ಶ್ರೀ ಜೋಡಿದಾರ್ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪರಿಷತ್‍ನ ಸಂಘಟನಾತ್ಮಾಕ ವಿಚಾತರವಾಗಿ 2023-24ನೇ ಸಾಲಿನ ಶಾಖೆಗಳು ಸದಸ್ಯತ್ವ, ಕಾಲೇಜು ಘಟಕ, ಹಾಸ್ಟಲ್ ಘಟಕ, ಸ್ಥಾನ ವಿಸ್ತಾರ ಕೇಂದ್ರ ಕುರಿತಂತೆ ಗರಿವಿಧಿ ಮತ್ತು ಆಯಾಮ ಕಾರ್ಯಗಳ ಕುರಿತು ಚರ್ಚೆಯನ್ನು ನಡೆಸಲಾಯಿತು.

ರಾಜ್ಯದ ಶೈಕ್ಷಣಿಕ ಪರಿಸ್ಥಿತಿ, ರಾಜ್ಯದ ವರ್ತಮಾನ ಪರಿಸ್ಥಿತಿ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ-2020 ರದ್ದತಿಗೆ ಖಂಡನೆ ಕುರಿತಂತೆ ಅಂಗೀಕರಿಸಲಾಯಿತು. ರಾಜ್ಯ ಸರ್ಕಾರ ಇತ್ತೀಚೆಗೆ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಸ್ಕಾಲರ್ ಶಿಪ್‍ನ್ನು ನಿಲ್ಲಿಸಿದೆ. ಇದರ ಬಗ್ಗೆ ಹೋರಾಟವನ್ನು ಎಬಿವಿಪಿ ಕೈಗೆತ್ತಿಕೊಳ್ಳಲಿದೆ. ಈ ವಿದ್ಯಾರ್ಥಿ ವೇತನವನ್ನು ನಂಬಿಕೊಂಡು ಲಕ್ಷಾಂತರ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ, ಇದಕ್ಕೆಲ್ಲಾ ರಾಜದ್ಯ ಸರ್ಕಾರ ಬರೆ ಎಳೆಯುತ್ತಿದೆ.

ಇದರೊಂದಿಗೆ ಕೇಂದ್ರ ಸರ್ಕಾರ ಶಿಕ್ಷಣ ನೀತಿಯನ್ನು ಜಾರಿ ಮಾಡಿದೆ. ಇದನ್ನು ರಾಜ್ಯ ಸರ್ಕಾರ ಜಾರಿ ಮಾಡಿತ್ತು. ಆದರೆ ಈಗ ಬಂದಿರುವ ಸರ್ಕಾರ ಅದನ್ನು ರದ್ದು ಮಾಡಿ ತನ್ನದೇ ಆದ ಶಿಕ್ಷಣ ನೀತಿಯನ್ನು ಜಾರಿ ಮಾಡಲು ಹೊರಟಿದೆ, ಇದನ್ನು ಎಬಿವಿಪಿ ಖಂಡಿಸುತ್ತದೆ ಎಂದರು.

ರಾಜ್ಯ ಸರ್ಕಾರ ಎನ್.ಇ.ಪಿಯನ್ನು ರದ್ದು ಮಾಡಲು ಮುಂದಾಗಿದೆ ಇದನ್ನು ಖಂಡಿಸುತ್ತದೆ ರಾಜ್ಯದಲ್ಲಿ ಒಂದೊಂದು ಸರ್ಕಾರ ಆಡಳಿತವನ್ನು ನಡೆಸುವಾಗಲೂ ಒಂದೊಂದು ರೀತಿಯ ಶಿಕ್ಷಣ ಪದ್ದತಿಯನ್ನು ಜಾರಿ ಮಾಡುತ್ತದೆ ಇದರಿಂದ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಯಾವ ಶಿಕ್ಷಣವನ್ನು ಪಡೆಯಬೇಕೆಂದು ಗೊಂದಲಿದ್ದಾರೆ ಎಂದ ಅವರು, ರಾಜ್ಯ ಸರ್ಕಾರ ತನ್ನ ಶಿಕ್ಷಣ ನೀತಿಯನ್ನು ಬರೀ ಕೇವಲ 5 ತಿಂಗಳಲ್ಲಿಯೇ ತಯಾರು ಮಾಡಿ ವಿದ್ಯಾರ್ಥಿಗಳಿಗೆ ನೀಡುವ ದಿಸೆಯಲ್ಲಿದೆ. ಇದೇ ರೀತಿ ಹಾಸ್ಟಲ್‍ಗಳ ಪರಿಸ್ಥಿತಿಯು ಸಹಾ ಸರಿಯಿಲ್ಲ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟಲ್ ಇಲ್ಲ ಇದರ ನಿರ್ಮಾಣಕ್ಕೂ ಸಹಾ ಸರ್ಕಾರ ಮುಂದಾಗಿಲ್ಲ, ಶೌಚಾ೧ಲಯಗಳು ಇಲ್ಲವಾಗಿದೆ. ಇದರ ಬಗ್ಗೆ ಸರ್ವೆಯನ್ನು ಮಾಡುವುದರ ಮೂಲಕ ಸರ್ಕಾರಕ್ಕೆ ವರದಿಯನ್ನು ನೀಡಲಾಗುವುದು ಎಂದು ಪ್ರೇಮ ತಿಳಿಸಿದರು.

2023-24ನೇ ಸಾಲಿನಲ್ಲಿ ಕನಾಟಕ ದಕ್ಷಿಣ ಪ್ರಾಂತದ 1,83,690 ಸದಸ್ಯತ್ವವು, 145 ಶಾಖೆಗಳು, 615 ಕಾಲೇಜು ಘಟಕಗಳು, 118 ಸಂಪರ್ಕ ಸ್ಥಾನ 140 ವಿಸ್ತಾರ ಕೇಂದ್ರಗಳನ್ನು ಹೊಂದಿದೆ. ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮಾವೇಶವನ್ನು ಬಾಗಲಕೋಟೆಯಲ್ಲಿ ನಡೆಸಲಾಗುವುದು ಇದೇ ನ. 9 ರಂದು ಶಿವಮೊಗ್ಗದಲ್ಲಿ ನ. 10 ರಂದು ಬೆಂಗಳೂರಿನಲ್ಲಿ ಕಾಲೇಜು ಘಟಕಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ನವದೆಹಲಿಯಲ್ಲಿ ಡಿ.7 ರಿಂದ 10ರವರೆಗೆ ರಾಷ್ಟ್ರೀಯ ಸಮಾವೇಶ ನಡೆಯಲಿದೆ ಎಂದು ಹೇಳಿದರು.

ಗೋಷ್ಟಿಯಲ್ಲಿ ಜಿಲ್ಲಾ ಸಂಚಾಲಕ ಸಿದ್ದೇಶ್, ನಗರ ಕಾರ್ಯದರ್ಶಿ ಗೋಪಿ ವರುಣು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

error: Content is protected !!