Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಷ್ಟ್ರೀಯ ವೈದ್ಯರ ದಿನಾಚರಣೆ | ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅರ್ಥಪೂರ್ಣ ಆಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 01 : ನಗರದ ಪ್ರತಿಷ್ಠಿತ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ, ರಾಷ್ಟ್ರೀಯ ವೈದ್ಯರ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.

ಶಾಲೆಯಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳು ವೈದ್ಯರ ವೇಷಭೂಷಣ ಧರಿಸಿ ತಮ್ಮ ಮುಂದಿನ ದಿನಗಳಲ್ಲಿ ಡಾಕ್ಟರ್ ಆಗುವ ಕನಸಿಸ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಕನಸು ಕಾಣುವ ವಯಸ್ಸಿನಲ್ಲಿ ಕನಸು ಕಂಡು ಅದನ್ನು ನನಸು ಮಾಡಿಕೊಳ್ಳಲು ಶ್ರಮ ಪಟ್ಟು ಓದಬೇಕು ಎಂದು ಸಂಪತ್ ಕುಮಾರ್ ಸಿ ಡಿ ರವರು ಹೇಳಿದರು. ಪ್ರಾಥಮಿಕ ವಿಭಾಗದ ಸಂಯೋಜಕರಾದ ಶ್ರೀಮತಿ ರಾಜೇಶ್ವರಿ ಬಸವರಾಜಯ್ಯ ರವರು ಮುದ್ದು ಮಕ್ಕಳಿಗೆ ಮಾರ್ಗದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀಮತಿ ಚಂದ್ರಕಲಾ ಚಂದ್ರಪ್ಪ, ಮುಖ್ಯ ಕಾರ್ಯ ನಿರ್ವಣಾಧಿಕಾರಿಯವರಾದ ರಘುಚಂದನ್, ಶಾಲೆಯ ಡೀನ್ ಆದ ಅನಂತ ರಾಮ್, ಶೈಕ್ಷಣಿಕ ನಿರ್ದೇಶಕರಾದ ಸಂಪತ್ ಕುಮಾರ್ ಸಿ ಡಿ, ಪ್ರಾoಶುಪಾಲರಾದ ಪಿ.ಬಸವರಾಜಯ್ಯ, ಮುಖ್ಯ ಶಿಕ್ಷಕರಾದ ಜಾರೀನಾ, ಪಿ ಆರ್ ಓ ರವಿಕುಮಾರ್ ಮತ್ತು ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now