Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನ್ಯಾಷನಲ್ ಹೆರಾಲ್ಡ್ ಕೇಸ್.. ಡಿಕೆಶಿಗೆ ಮತ್ತೆ ನೋಟೀಸ್.. ಡಿಸಿಎಂ ಹೇಳಿದ್ದೇನು..?

ಡಿಕೆ ಶಿವಕುಮಾರ್
---Advertisement---

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಕೇಸ್ ಇನ್ನು ಮುಕ್ತಾಯವಾಗಿಲ್ಲ. ಅದೇ ಕೇಸಲ್ಲಿ ಈಗಾಗಲೇ ಡಿಕೆ ಶಿವಕುಮಾರ್ ಅವರನ್ನು ತನಿಖೆ ನಡೆಸುತ್ತಿದೆ. ಈಗ ಮತ್ತೆ ನೋಟೀಸ್ ನೀಡಿರುವ ಇಡಿ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳು ಕಾಂಗ್ರೆಸ್ ಪಕ್ಷದ ಅಧೀನದಲ್ಲು ಕಾರ್ಯನಿರ್ವಹಿಸುತ್ತಿವೆ. ಪಕ್ಷದ ಸಂಕಷ್ಟದ ಸಮಯದಲ್ಲಿ, ನಮ್ಮಂತಹ ಕಾಂಗ್ರೆಸ್ಸಿಗರು ಟ್ರಸ್ಟ್ ಗಳ ಮೂಲಕ ಆ ಅಂಸ್ಥೆಗಳಿಗೆ ಸಹಾಯ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ತಮಗೆ ಇಡಿ ನೋಟೀಸ್ ಬಂದ ಕೂಡಲೇ ಅಗತ್ಯವಿರುವ ಎಲ್ಲಾ ಮಾಹಿತಿ ಹಾಗೂ ಉತ್ತರಗಳನ್ನು ಈಗಾಗಲೇ ನೀಡಲಾಗಿದೆ. ಚಾರ್ಜ್ ಶೀಟ್ ಕೂಡ ಸಲ್ಲಿಕೆಯಾಗಿದೆ. ಇದೀಗ ದೆಹಲಿ ಪೊಲೀಸರು ಈ ತಿಂಗಳ 19ರ ಒಳಗೆ ಬಂದು ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಇದನ್ನು ಕಾನೂನಾತ್ಮಕವಾಗಿ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಚಾರ್ಜ್ ಶೀಟ್ ಕೂಡ ಆಗಿದೆ. ಇದಾದ ಮೇಲೂ ದೆಹಲಿ ಪೊಲೀಸರು ನೋಟೀಸ್ ನೀಡಿದ್ದಾರೆ. ಗೊತ್ತಿಲ್ಲ ಏನು ಅಂತ. ಕಾನೂನಾತ್ಮಕವಾಗಿಯೇ ಅದಕ್ಕೆ ಉತ್ತರ ಕೊಡ್ತೇವೆ. ಇದು ಸರಿಯಿಲ್ಲ ನಾನು ಖಂಡಿಸ್ತೇನೆ. ನಾನು ಕೂಡ ಈ ನೋಟೀಸ್ ನಿಂದ ಶಾಕ್ ಆಗಿದ್ದೇನೆ. ಇಡಿ ಅಧಿಕಾರಿಗಳಿಗೆ ಈಗಾಗಲೇ ಎಲ್ಲಾ ರೀತಿಯ ದಾಖಲೆಗಳನ್ನು ನೀಡಿದ್ದೇವೆ. ನಾನು ಮತ್ತು ನನ್ನ ತಮ್ಮ ಇಬ್ಬರು ಎಲ್ಲಾ ಮಾಹಿತಿ ಕೊಟ್ಟಿದ್ದೇವೆ. ಆದರೂ ನೋಟೀಸ್ ನೀಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸದ್ಯ ಇಡಿ ಅಧಿಕಾರಿಗಳು ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಯನ್ನ ನಡೆಸ್ತಾ ಇದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಜೊತೆಗೆ ಡಿಕೆ ಶಿವಕುಮಾರ್ ಅವರಿಗೂ ಸಂಕಷ್ಟ ಎದುರಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now