ಹ್ಯಾಂಡ್‍ಬಾಲ್‍ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ  : ಬಾಲಕಿಯರ ರಾಜ್ಯ ತಂಡದ ನಾಯಕಿಯಾಗಿ ಚಿತ್ರದುರ್ಗದ ಸಾನಿಯಾ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,                         
ಮೊ : 87220 22817

ಚಿತ್ರದುರ್ಗ,(ಮಾ.18) : ಸಾನಿಯ ಈಗ 5ನೇ ಬಾರಿ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಕರ್ನಾಟಕ ರಾಜ್ಯ ತಂಡದ ನಾಯಕಿಯಾಗಿ ಆಯ್ಕೆಯಾಗಿರುತ್ತಾರೆ ಎಂದು ಚಿತ್ರದುರ್ಗ ಜಿಲ್ಲಾ ಹ್ಯಾಂಡ್‍ಬಾಲ್ ಸಂಸ್ಥೆ(ರಿ),ಯ ಕಾರ್ಯಾಧ್ಯಕ್ಷರಾದ ಕೆ.ಹೆಚ್.ಶಿವರಾಮು ತಿಳಿಸಿದ್ದಾರೆ.

20 ವರ್ಷದೊಳಗಿನ ರಾಷ್ಟ್ರಮಟ್ಟದ ಹ್ಯಾಂಡ್‍ಬಾಲ್ ಪಂದ್ಯಾವಳಿಗೆ ಬಾಲಕ / ಬಾಲಕಿಯರ ವಿಭಾಗದಲ್ಲಿ ನಾಲ್ಕು ಜನ ಕ್ರೀಡಾಪಟುಗಳು ಆಯ್ಕೆಯಾಗಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ವೆಸ್ಟ್ರನ್ ಹಿಲ್ಸ್ ಕಾಲೇಜಿನ ವಿದ್ಯಾರ್ಥಿನಿ ಸಾನಿಯಾ ಹಾಗೂ ಎಸ್.ಜೆ.ಎಂ ಮಹಿಳಾ ಕಾಲೇಜಿನ ವಿದ್ಯಾರ್ಥಿ ಆರ್.ರಂಜಿತಾ, ಬಾಲಕಿಯರ ವಿಭಾಗದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ, ವಿಷ್ಣು.ಎನ್.ವಿ ಹಾಗೂ ಸಾವಂತ್ ಹಿಮಗಿರಿ ಆಯ್ಕೆಯಾಗಿದ್ದಾರೆ.

ಬಾಲಕಿಯರ 45ನೇ ರಾಷ್ಟ್ರೀಯ ಹ್ಯಾಂಡ್‍ಬಾಲ್ ಪಂದ್ಯಾವಳಿಗಳು ಉತ್ತರ ಪ್ರದೇಶ ಬರೇಲಿಯಲ್ಲಿ ಮಾ.22 ರಿಂದ 26 ರವರೆಗೆ ಹಾಗೂ ಬಾಲಕರ ರಾಷ್ಟ್ರೀಯ ಹ್ಯಾಂಡ್‍ಬಾಲ್ ಪಂದ್ಯಾವಳಿಗಳು, ರಾಜಸ್ತಾನದ ಬನ್ಸ್‍ವಾರದಲ್ಲಿ ಮಾ. 27 ರಿಂದ 31 ರವರೆಗೆ ನಡೆಯಲಿದೆ.

ಈ ಎಲ್ಲಾ ಕ್ರೀಡಾಪಟುಗಳಿಗೆ ಜಿಲ್ಲಾ ಹ್ಯಾಂಡ್‍ಬಾಲ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಸಂಸ್ಥೆಯ ಕಾರ್ಯದರ್ಶಿ ಡಾ|| ಎನ್.ಡಿ.ಗೌಡ, ಖಜಾಂಚಿ ಸಿ.ಎಸ್.ಪ್ರೇಮಾನಂದ ತರಬೇತುದಾರರಾದ ಕಾರ್ತಿಕ್ ಶುಭ ಕೋರಿರುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇಕದಾಟು ಅಣೆಕಟ್ಟು ನಿರ್ಮಾಣ ಕಾವೇರಿ ನದಿ ನೀರು ಸಮಸ್ಯೆಗೆ ಪರಿಹಾರ : ಸಚಿವ ಕೆ.ಹೆಚ್.ಮುನಿಯಪ್ಪ

  ಚಿತ್ರದುರ್ಗ, ಸೆಪ್ಟೆಂಬರ್, 23 : ರಾಜ್ಯ ಸರ್ಕಾರ ಕಾವೇರಿ ಪ್ರಾಧಿಕಾರದ ಆದೇಶದಂತೆ ಪ್ರತಿ ವರ್ಷ 177  ಟಿಎಂಸಿ ನೀರು ತಮಿಳುನಾಡಿಗೆ ನೀಡಬೇಕು. ಆದರೆ ಕಳೆದ ವರ್ಷ 600 ಟಿಎಂಸಿ ನೀರು ವೃಥಾ ಹರಿದು

ಕಾವೇರಿ ಕಿಚ್ಚು : ಚಿತ್ರದುರ್ಗದಲ್ಲಿ ಕರವೇ ಪ್ರವೀಣ್‍ಕುಮಾರ್ ಶೆಟ್ಟಿ ಬಣ ಪ್ರತಿಭಟನೆ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23  : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಹಾಗೂ ಕಾವೇರಿ ನದಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಣಯದ ವಿರುದ್ದ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‍ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಶನಿವಾರ

ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಶ್ರೀಮತಿ ಸಿ.ಕೆ. ಸಂಧ್ಯಾರವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಧಾನ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23 : ಉತ್ತಮ ಸೇವೆಗಾಗಿ ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆಂಟ್ ಸಿ.ಕೆ ಸಂದ್ಯಾರವರಿಗೆ ಬೆಂಗಳೂರಿನ ಜಯನಗರದ  ಮುಂಢ್ಕರ್ ಅಗ್ನಿಶಾಮಕ  ಅಕಾಡೆಮಿ ಸಂಭಾಗಣದಲ್ಲಿ ಗೃಹ ಸಚಿವರಾದ ಪರಮೇಶ್ವರ್‍ರವರು ಮುಖ್ಯ ಮಂತ್ರಿಗಳ ಚಿನ್ನದ

error: Content is protected !!