Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಷ್ಟ್ರೀಯ ಪಕ್ಷಗಳೇ ಕಾನೂನು ತರಲಿ : ಕುಟುಂಬ ರಾಜರಾಣದ ಬಗ್ಗೆ ಹೆಚ್ ಡಿ ರೇವಣ್ಣ ಹೇಳಿಕೆ..!

Facebook
Twitter
Telegram
WhatsApp

ಹಾಸನ : ಜೆಡಿಎಸ್ ನಲ್ಲಿ ಕುಟುಂಬ ರಾಜಕಾರಣದ ಆರೋಪ ಇಂದು ನಿನ್ನೆಯದಲ್ಲ. ಈಗ ಪರಿಷತ್ ಚುನಾವಣೆಗೂ ಕುಟುಂಬದವರಿಗೆ ಟಿಕೆಟ್ ನೀಡಿರುವುದು ಕೆಲವರ ಕಣ್ಣನ್ನ ಕೆಂಪು ಮಾಡಿದೆ. ಈ ಬಗ್ಗೆ ಹೆಚ್ ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರೀಯ ಪಕ್ಷಗಳೇ ಕಾನೂನು ತರಲಿ ಎಂದಿದ್ದಾರೆ.

ನಗರದಲ್ಲಿ ಮಾತನಾಡಿದ ರೇವಣ್ಣ ಅವರು, ಹಲವು ದಶಕದಿಂದಲೂ ಎಲ್ಲಾ ರಾಷ್ಟ್ರೀಯ ಪಕ್ಷದಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿದೆ. ಇದನ್ನು ಕೊನೆಗಾಣಿಸಲು ರಾಷ್ಟ್ರೀಯ ಪಕ್ಷಗಳೇ ಕಾನೂನು ತರಲಿ.‌ ಹೊಸ ಕಾನೂನು ತಂದರೆ ಅದಕ್ಕೆ ನಾವೂ ಸ್ವಾಗತ ಮಾಡ್ತೇವೆ ಎಂದಿದ್ದಾರೆ.

ಇನ್ನು ಇದೇ ವೇಳೆ ಬೆಳೆ ಪರಿಹಾರದ ಬಗ್ಗೆಯೂ ಮಾತನಾಡಿದ್ದು, ರೈತರ ನೆರವಿಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕಾದ ಬಿಜೆಪಿ ಸರ್ಕಾರ ಎಕ್ಟೇರ್ ಗೆ ಕೇವಲ 6000 ರೂಪಾಯಿ ಪರಿಹಾರ ನೀಡಲು ಹೊರಟಿದೆ. ಇದು ರೈತರಿಗೆ ವೈಜ್ಞಾನಿಕ ಪರಿಹಾರವಲ್ಲ. ಜಿಲ್ಲೆಯಲ್ಲಿ ವಿಪರೀತ ಮಳೆಯ ಕಾರಣ ಮೆಕ್ಕೆಜೋಳ, ರಾಗಿ, ಭತ್ತ, ಕಾಫಿ, ತರಕಾರಿ ಸೇರಿದಂತೆ ಇತರೆ ಪ್ರಮುಖ ಬೆಳೆ ನಾಶವಾಗಿದೆ. 29 ಸಾವಿರ ಹೆಕ್ಟೇರ್ ಕಾಫಿ, 4,200 ಹೆಕ್ಟೇರ್ ಕಾಳು‌ಮೆಣಸು, 2,000 ಹೆಕ್ಟೇರ್ ತರಕಾರಿ ಮತ್ತು ಇತರೆ ಬೆಳೆ 1,000 ಹೆಕ್ಟೇರ್‌ನಲ್ಲಿ ನಾಶವಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

ಚಿತ್ರದುರ್ಗ | ಮೂವರು ಮಹಿಳೆಯರು ಕಾಣೆ : ಪತ್ತೆಗೆ ಮನವಿ

ಚಿತ್ರದುರ್ಗ. ಅ.18: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು  ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ

ಜೈಲಿನಿಂದ ಬಿಡುಗಡೆಯಾದ ನಾಗೇಂದ್ರರಿಗೆ ಹೊಸ ಟಾಸ್ಕ್ ನೀಡಿದ ಸಿಎಂ ಸಿದ್ದರಾಮಯ್ಯ..!

  ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಬಂಧಿಯಾಗಿದ್ದ ಬಿ.ನಾಗೇಂದ್ರ ಅವರು ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಜಮೀರ್ ಅಹ್ಮದ್ ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ

error: Content is protected !!