Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್‍ಜೆಎಂ  ಫಾರ್ಮಸಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜನವರಿ.12  : ದೇಶದ ಏಕತೆಗೆ ಮತ್ತು ಅಭಿವೃದ್ಧಿಗೆ ಯುವಶಕ್ತಿಗೆ ಸ್ವಾಮಿವಿವೇಕಾನಂದರ ಮೂಲಮಂತ್ರ “ಏಳಿ ಎದ್ದೇಳಿ ಎಚ್ಚರಗೊಳ್ಳಿ ಮತ್ತು ಗುರಿಯನ್ನು ತಲುಪುವವರೆಗೆ ನಿಲ್ಲಬೇಡಿ. ವಿದ್ಯಾರ್ಥಿ ಜೀವನದಲ್ಲಿ ಮುಂದೆ ಬರಲು ಮತ್ತು ದೇಶವನ್ನು ಸುಭದ್ರವಾಗಿ ಕಟ್ಟಲು ಇದೊಂದು ಸಂದೇಶ ಸಾಕು ಎಂದು

ರೆಡ್ ಕ್ರಾಸ್ ಸಮಿತಿಯ ಕಾರ್ಯದರ್ಶಿ ಮಜುರುಲ್ಲಾ ಹೇಳಿದರು.

ನಗರದ ಎಸ್‍ಜೆಎಂ  ಫಾರ್ಮಸಿ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಅವರ 161ನೇ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ನಂತರ ಪ್ರಾಂಶುಪಾಲ ಡಾ. ಟಿ. ಎಸ್. ನಾಗರಾಜ್ ಅವರು ಮಾತನಾಡಿ,  ಯುವ ಜನತೆಗೆ ಜಾಗೃತರಾಗಿ ನೀವು ಓದುತ್ತಿರುವ ಗುರಿಯನ್ನು ತಲುಪಿ ಕಾಲೇಜಿಗೆ ಮತ್ತು ರಾಷ್ಟ್ರಕ್ಕೆ ಆಸ್ತಿಯಾಗಿ ಬೆಳೆಯಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ಯುವ ದಿನದ ಅಂಗವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು.

ಮೊದಲ ಬಹುಮಾನವನ್ನು ಪೂಜಾ ಬಿ ಸಿ ಎಂ ಫಾರ್ಮ ಎರಡನೇ ಬಹುಮಾನವನ್ನು ನೇಹಾ ಯು ಎಂ ಫಾರ್ಮ ಡಿ ಹಾಗೂ ತೃತೀಯ ಬಹುಮಾನವನ್ನು ಬಿ ಕೀರ್ತಿ ಬಿ ಫಾರ್ಮ ವಿದ್ಯಾರ್ಥಿಗಳು ಬಹುಮಾನವನ್ನು ಪಡೆದರು.

ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಚೈತ್ರ ಮತ್ತು ಸಂಗಡಿಗರು ಹಾಡಿದರು. ಸ್ವಾಗತವನ್ನು  ಶಮಂತಕ ಮಣಿ, ವಂದನಾರ್ಪಣೆಯನ್ನು ಕಿರಣï ಹಾಗೂ ನಿರ್ವಹಣೆಯನ್ನು ಚಂದನ್ ಎಂ ಫಾರ್ಮಾ ವಿದ್ಯಾರ್ಥಿಗಳು ನೆರವೇರಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.   ಆರೋಪವೆಂಬುದು

ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಕೋರಿದ ಎಸ್ ಆರ್ ಎಸ್ ಹೆರಿಟೇಜ್ ಶಾಲೆ

  ಸುದ್ದಿಒನ್, ಚಿತ್ರದುರ್ಗ, ಮೇ. 20 : ಎಸ್ ಆರ್ ಎಸ್ ಹೆರಿಟೇಜ್ ಶಾಲೆಯು 2024-25 ರ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು ಬೇಸಿಗೆ ರಜಾ ಮುಗಿಸಿಕೊಂಡು ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

error: Content is protected !!