ಎಸ್‍ಜೆಎಂ  ಫಾರ್ಮಸಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಸುದ್ದಿಒನ್, ಚಿತ್ರದುರ್ಗ, ಜನವರಿ.12  : ದೇಶದ ಏಕತೆಗೆ ಮತ್ತು ಅಭಿವೃದ್ಧಿಗೆ ಯುವಶಕ್ತಿಗೆ ಸ್ವಾಮಿವಿವೇಕಾನಂದರ ಮೂಲಮಂತ್ರ “ಏಳಿ ಎದ್ದೇಳಿ ಎಚ್ಚರಗೊಳ್ಳಿ ಮತ್ತು ಗುರಿಯನ್ನು ತಲುಪುವವರೆಗೆ ನಿಲ್ಲಬೇಡಿ. ವಿದ್ಯಾರ್ಥಿ ಜೀವನದಲ್ಲಿ ಮುಂದೆ ಬರಲು ಮತ್ತು ದೇಶವನ್ನು ಸುಭದ್ರವಾಗಿ ಕಟ್ಟಲು ಇದೊಂದು ಸಂದೇಶ ಸಾಕು ಎಂದು

ರೆಡ್ ಕ್ರಾಸ್ ಸಮಿತಿಯ ಕಾರ್ಯದರ್ಶಿ ಮಜುರುಲ್ಲಾ ಹೇಳಿದರು.

ನಗರದ ಎಸ್‍ಜೆಎಂ  ಫಾರ್ಮಸಿ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಅವರ 161ನೇ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ನಂತರ ಪ್ರಾಂಶುಪಾಲ ಡಾ. ಟಿ. ಎಸ್. ನಾಗರಾಜ್ ಅವರು ಮಾತನಾಡಿ,  ಯುವ ಜನತೆಗೆ ಜಾಗೃತರಾಗಿ ನೀವು ಓದುತ್ತಿರುವ ಗುರಿಯನ್ನು ತಲುಪಿ ಕಾಲೇಜಿಗೆ ಮತ್ತು ರಾಷ್ಟ್ರಕ್ಕೆ ಆಸ್ತಿಯಾಗಿ ಬೆಳೆಯಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ಯುವ ದಿನದ ಅಂಗವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು.

ಮೊದಲ ಬಹುಮಾನವನ್ನು ಪೂಜಾ ಬಿ ಸಿ ಎಂ ಫಾರ್ಮ ಎರಡನೇ ಬಹುಮಾನವನ್ನು ನೇಹಾ ಯು ಎಂ ಫಾರ್ಮ ಡಿ ಹಾಗೂ ತೃತೀಯ ಬಹುಮಾನವನ್ನು ಬಿ ಕೀರ್ತಿ ಬಿ ಫಾರ್ಮ ವಿದ್ಯಾರ್ಥಿಗಳು ಬಹುಮಾನವನ್ನು ಪಡೆದರು.

ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಚೈತ್ರ ಮತ್ತು ಸಂಗಡಿಗರು ಹಾಡಿದರು. ಸ್ವಾಗತವನ್ನು  ಶಮಂತಕ ಮಣಿ, ವಂದನಾರ್ಪಣೆಯನ್ನು ಕಿರಣï ಹಾಗೂ ನಿರ್ವಹಣೆಯನ್ನು ಚಂದನ್ ಎಂ ಫಾರ್ಮಾ ವಿದ್ಯಾರ್ಥಿಗಳು ನೆರವೇರಿಸಿದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

41 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago