Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾವಿನಲ್ಲೂ ಸಾರ್ಥಕತೆ ಮೆರೆದ ನವೀನ್ ಕುಟುಂಬ : ಅಂತಿಮ ಯಾತ್ರೆ ಬಳಿಕ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ..!

Facebook
Twitter
Telegram
WhatsApp

ಹಾವೇರಿ: ರಷ್ಯಾ ಮತ್ತು ಉಕ್ರೇನ್ ದಾಳಿಯಿಂದಾಗಿ ವೈದ್ಯಕೀಯ ಶಿಕ್ಷಣ ಪಡೆಯಲು ಹೋಗಿದ್ದ ನವೀನ್ ರಷ್ಯಾ ದಾಳಿಗೆ ಸಾವನ್ನಪ್ಪಿದ್ದರು. ಕಳೆದ 20 ದಿನಗಳಿಂದ ಯುದ್ಧ ನಡೆಯುತ್ತಿದ್ದ ಕಾರಣ ಮೃತದೇಹ ತರಲು ಸಾಧ್ಯವಾಗಿಲ್ಲ. ಆದ್ರೆ ಸರ್ಕಾರ ಕೊಟ್ಟ ಮಾತಂತೆ ನಡೆದುಕೊಂಡಿದೆ.

ಇಂದು ಚಳಗೇರಿಗೆ ನವೀನ್ ಮೃತದೇಹ ತಲುಪಿದೆ. ಬೆಳಗ್ಗೆಯೇ ಮೃತದೇಹ ತಲುಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನವೀನ್ ಮೃತದೇಹ ನೋಡಿ ತಂದೆ ತಾಯಿ, ಸಹೋದರ ಕಣ್ಣೀರಲ್ಲೇ ಮುಳುಗಿದ್ದಾರೆ.

 

ನವೀನ್ ಮೃತದೇಹ ಬಂದ ಕೂಡಲೇ ಚಳಗೇರಿಗೆ ಸಿಎಂ ಬೊಮ್ಮಾಯಿ ಅವರು ಭೇಟಿ ನೀಡಿದ್ದರು. ಮೃತದೇಹದ ಅಂತಿಮ ದರ್ಶನ ಪಡೆದಿದ್ದಾರೆ, ಸಿಎಂ ಬೊಮ್ಮಾಯಿ ಅವರು.

ಇನ್ನು ಮಧ್ಯಾಹ್ನ 3 ಗಂಟೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಿದ್ದಾರೆ. ಚಳಗೇರಿ ಬಸ್ ನಿಲ್ದಾಣದವರೆಗೂ ಮೆರವಣಿಗೆ ನಡೆಯಲಿದೆ. ಬಳಿಕ ಮೆಡಿಕಲ್ ಕಾಲೇಜಿಗೆ ನವೀನ್ ದೇಹವನ್ನ ಕುಟುಂಬಸ್ಥರು ದಾನ ಮಾಡಲಿದ್ದಾರೆ. ಕಳೆದ 20 ದಿನದಿಂದ ಹಿಡಿದಿಟ್ಟುಕೊಂಡಿದ್ದ ನೋವಿನ ಕಟ್ಟೆ ಹೊಡೆದಿದೆ. ಆದರೆ ಸಾವಿನಲ್ಲೂ ವಿದ್ಯಾರ್ಥಿಗಳಿಗಾಗಿ ದೇಹದಾನ‌ಮಾಡಿದ್ದಾರೆ. ಮಗ ಕೂಡ ಇದೇ ರೀತಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದರು. ಹೀಗಾಗಿ ಪ್ರಾಕ್ಟಿಕಲ್ ಬಗ್ಗೆ ಎಲ್ಲಾ ಹೇಳಿಕೊಂಡಿದ್ದರೇನೋ. ಅದಕ್ಕೆ ಈ ನಿರ್ಧಾರಕ್ಕೂ ಕುಟುಂಬ ಬಂದಿರಬಹುದು. ಒಟ್ಟಾರೆ ನವೀನ್ ಸಾವಿನಲ್ಲೂ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!