Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವರಾತ್ರಿಯೂ ಆರಂಭ : ನಾಳೆ ದರ್ಶನ್ ಗೆ ಸಿಗಬಹುದಾ ಜಾಮೀನು..?

Facebook
Twitter
Telegram
WhatsApp

ಬಳ್ಳಾರಿ: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿ ನೂರು ದಿನಗಳ ಮೇಲಾಗಿದೆ. ಅದರಲ್ಲೂ ಬಳ್ಳಾರಿ ಜೈಲಿನಲ್ಲಿ ಒಂಟಿಯಾಗಿ ಜೀವನ ಕಳೆದು 36 ದಿನಗಳಾಗಿವೆ. ಪರಪ್ಪನ ಅಗ್ರಹಾರದಲ್ಲಿದ್ದಾಗ ಹೇಗೋ ಸಂಗಡಿಗರು ಜೊತೆಗಿದ್ದರು. ಆದರೆ ಬಳ್ಳಾರಿ ಜೈಲಿನಲ್ಲಿ ಹಾಗಲ್ಲ. ಯಾರೂ ಇಲ್ಲದೆ ಒಂಟಿಯಾಗಿದ್ದಾರೆ. ಜೈಲಿನಿಂದ ಯಾವಾಗ ಬಿಡುಗಡೆಯಾಗ್ತಿನೋ ಎಂದೇ ಕಾಯುತ್ತಿದ್ದಾರೆ. ನಾಳೆ ದರ್ಶನ್ ಅವರ ಅರ್ಜಿ ವಿಚಾರಣೆ ನಡೆಯಲಿದೆ. ಜಾಮೀನು ಸಿಗುತ್ತಾ..? ವಿಚಾರಣೆ ಮುಂದೂಡಿಕೆಯಾಗುತ್ತಾ ನೋಡಬೇಕಿದೆ.

ಜಾಮೀನು ಸಿಗುವ ಸಾಧ್ಯತೆ ಯೋಚಿಸಿದರೆ ಸ್ವಲ್ಪ ಕಡಿಮೆಯೆ. ಯಾಕಂದ್ರೆ ದರ್ಶನ್ ಪರ ವಕೀಲರು ವಾದ ಮಂಡಿಸುವುದಕ್ಕೆ ಇನ್ನು ಶುರುನೇ ಮಾಡಿಲ್ಲ. ಎರಡು ಬಾರಿಯಿಂದ ಕಾಲವಕಾಶ ಕೇಳುತ್ತಲೇ ಇದ್ದಾರೆ. ಹೀಗಾಗಿ ನಾಳೆ ವಾದ ಮಂಡಿಸುತ್ತಾರೋ ಅಥವಾ ಮತ್ತೆ ಕಾಲವಕಾಶ ಕೇಳುತ್ತಾರೋ ನೋಡಬೇಕಿದೆ.

ಇದರ ನಡುವೆ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದರು. ಮಗನನ್ನು ನೋಡಿ ಎಷ್ಟೋ ದಿನಗಳಾಗಿದ್ದ ಮಗ ಇಂದು ತಂದೆಯನ್ನು ನೋಡಿ ಭಾವುಕರಾಗಿದ್ದರು. ಬಳಿಕ ತಂದೆ ನೋಡಿದ ಖುಷಿಯೂ ವಿನೀಶ್ ಮುಖದಲ್ಲಿ ಕಾಣಿಸುತ್ತಿತ್ತು. ಪತಿಗಾಗಿ ವಿಜಯಲಕ್ಷ್ಮೀ ಹಣ್ಣು, ಬೇಕರಿ ತಿನಿಸು, ಡ್ರೈ ಫ್ರೂಟ್ಸ್ ಸೇರಿದಂತೆ ತಿನಿಸುಗಳನ್ನು ತಂದಿದ್ದರು. ನವರಾತ್ರಿ ಬೇರೆ ಆರಂಭವಾಗಿರುವ ಕಾರಣ ವಿಜಯಲಕ್ಷ್ಮೀಗೂ ಒಂದು ನಂಬಿಕೆ. ಈ ಬಾರಿ ಬೇಲ್ ಸಿಗುವ ಸಾಧ್ಯತೆ ಇದೆ ಎಂದು ದರ್ಶನ್ ಅವರ ಮುಂದೆಯೂ ಆತ್ಮವಿಶ್ವಾಸ ತೋರಿದ್ದಾರೆ ಎಂದೇ ಹೇಳಲಾಗುತ್ತಿದೆ. ಬೇಲ್ ಸಿಕ್ಕರೆ ಸಾಕಪ್ಪ, ಜೈಲು ಸಹವಾಸ ಬೇಡಪ್ಪ ಎನ್ನುತ್ತಿರುವ ದರ್ಶನ್, ಹೆಂಡತಿ, ಮಗನನ್ನು ನೋಡಿ ಖುಷಿಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

ದರ್ಶನ್ ಜಾಮೀನಿಗಾಗಿ ವಕೀಲರು ಮಂಡಿಸಿದ ವಾದವೇನು..? ಇಲ್ಲಿದೆ ಪಾಯಿಂಟ್ ಪಾಯಿಂಟ್ ಹೈಲೇಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿ ಬಹಳ ದಿನಗಳೇ ಕಳೆದಿವೆ. ಆದರೆ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಟಡಿ ಮಾಡುವ ಕಾರಣಕ್ಕೆ ಆಗಾಗ ದರ್ಶನ್

ದರ್ಶನ್ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ..!

ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿನ್ನೆಯಷ್ಟೇ ಬಳ್ಳಾರಿ ಜೈಲಿಗೆ ಭೇಟಿ ನೀಡಿ, ಧೈರ್ಯ ತುಂಬಿ ಹೋಗಿದ್ದರು. ಇಂದು ಜಾಮೀನು ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಆದರೆ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್

error: Content is protected !!