Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನವರಾತ್ರಿಯೂ ಆರಂಭ : ನಾಳೆ ದರ್ಶನ್ ಗೆ ಸಿಗಬಹುದಾ ಜಾಮೀನು..?

---Advertisement---

ಬಳ್ಳಾರಿ: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿ ನೂರು ದಿನಗಳ ಮೇಲಾಗಿದೆ. ಅದರಲ್ಲೂ ಬಳ್ಳಾರಿ ಜೈಲಿನಲ್ಲಿ ಒಂಟಿಯಾಗಿ ಜೀವನ ಕಳೆದು 36 ದಿನಗಳಾಗಿವೆ. ಪರಪ್ಪನ ಅಗ್ರಹಾರದಲ್ಲಿದ್ದಾಗ ಹೇಗೋ ಸಂಗಡಿಗರು ಜೊತೆಗಿದ್ದರು. ಆದರೆ ಬಳ್ಳಾರಿ ಜೈಲಿನಲ್ಲಿ ಹಾಗಲ್ಲ. ಯಾರೂ ಇಲ್ಲದೆ ಒಂಟಿಯಾಗಿದ್ದಾರೆ. ಜೈಲಿನಿಂದ ಯಾವಾಗ ಬಿಡುಗಡೆಯಾಗ್ತಿನೋ ಎಂದೇ ಕಾಯುತ್ತಿದ್ದಾರೆ. ನಾಳೆ ದರ್ಶನ್ ಅವರ ಅರ್ಜಿ ವಿಚಾರಣೆ ನಡೆಯಲಿದೆ. ಜಾಮೀನು ಸಿಗುತ್ತಾ..? ವಿಚಾರಣೆ ಮುಂದೂಡಿಕೆಯಾಗುತ್ತಾ ನೋಡಬೇಕಿದೆ.

ಜಾಮೀನು ಸಿಗುವ ಸಾಧ್ಯತೆ ಯೋಚಿಸಿದರೆ ಸ್ವಲ್ಪ ಕಡಿಮೆಯೆ. ಯಾಕಂದ್ರೆ ದರ್ಶನ್ ಪರ ವಕೀಲರು ವಾದ ಮಂಡಿಸುವುದಕ್ಕೆ ಇನ್ನು ಶುರುನೇ ಮಾಡಿಲ್ಲ. ಎರಡು ಬಾರಿಯಿಂದ ಕಾಲವಕಾಶ ಕೇಳುತ್ತಲೇ ಇದ್ದಾರೆ. ಹೀಗಾಗಿ ನಾಳೆ ವಾದ ಮಂಡಿಸುತ್ತಾರೋ ಅಥವಾ ಮತ್ತೆ ಕಾಲವಕಾಶ ಕೇಳುತ್ತಾರೋ ನೋಡಬೇಕಿದೆ.

ಇದರ ನಡುವೆ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದರು. ಮಗನನ್ನು ನೋಡಿ ಎಷ್ಟೋ ದಿನಗಳಾಗಿದ್ದ ಮಗ ಇಂದು ತಂದೆಯನ್ನು ನೋಡಿ ಭಾವುಕರಾಗಿದ್ದರು. ಬಳಿಕ ತಂದೆ ನೋಡಿದ ಖುಷಿಯೂ ವಿನೀಶ್ ಮುಖದಲ್ಲಿ ಕಾಣಿಸುತ್ತಿತ್ತು. ಪತಿಗಾಗಿ ವಿಜಯಲಕ್ಷ್ಮೀ ಹಣ್ಣು, ಬೇಕರಿ ತಿನಿಸು, ಡ್ರೈ ಫ್ರೂಟ್ಸ್ ಸೇರಿದಂತೆ ತಿನಿಸುಗಳನ್ನು ತಂದಿದ್ದರು. ನವರಾತ್ರಿ ಬೇರೆ ಆರಂಭವಾಗಿರುವ ಕಾರಣ ವಿಜಯಲಕ್ಷ್ಮೀಗೂ ಒಂದು ನಂಬಿಕೆ. ಈ ಬಾರಿ ಬೇಲ್ ಸಿಗುವ ಸಾಧ್ಯತೆ ಇದೆ ಎಂದು ದರ್ಶನ್ ಅವರ ಮುಂದೆಯೂ ಆತ್ಮವಿಶ್ವಾಸ ತೋರಿದ್ದಾರೆ ಎಂದೇ ಹೇಳಲಾಗುತ್ತಿದೆ. ಬೇಲ್ ಸಿಕ್ಕರೆ ಸಾಕಪ್ಪ, ಜೈಲು ಸಹವಾಸ ಬೇಡಪ್ಪ ಎನ್ನುತ್ತಿರುವ ದರ್ಶನ್, ಹೆಂಡತಿ, ಮಗನನ್ನು ನೋಡಿ ಖುಷಿಯಾಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment