ದುರ್ಗೋತ್ಸವ ಆಚರಿಸುವಂತೆ ನಾಯಕ ಸಮಾಜದಿಂದ ಸಚಿವ ಸತೀಶ್ ಜಾರಕಿಹೊಳಿರವರಿಗೆ ಮನವಿ

1 Min Read

 

ವರದಿ ಮತ್ತು ಫೋಟೋ ಕೃಪೆ

ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 25 : ಹಂಪಿ, ಕಿತ್ತೂರು ಉತ್ಸವದಂತೆ ಪ್ರತಿ ವರ್ಷವೂ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಚಿತ್ರದುರ್ಗ ನಾಯಕ ಸಮಾಜದಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿರವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಮಾರ್ಚ್ ಅಥವಾ ಏಪ್ರಿಲ್‍ನಲ್ಲಿ ದುರ್ಗೋತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಬೇಕೆಂಬುದು ದುರ್ಗದ ಜನರ ಒತ್ತಾಸೆಯಾಗಿರುವುದರಿಂದ ಈ ಬಾರಿಯ ರಾಜ್ಯ ಬಜೆಟ್ ಮಂಡನೆಯಲ್ಲಿ ಸೇರಿಸುವಂತೆ ನಾಯಕ ಸಮಾಜದವರು ಸಚಿವರನ್ನು ಒತ್ತಾಯಿಸಿದರು.

ತ.ರಾ.ಸು.ರಂಗಮಂದಿರದಲ್ಲಿ ನಡೆದ ಸಂವಿಧಾನ ರಕ್ಷಾ ಅಭಿಯಾನ ಉದ್ಗಾಟನೆಗಾಗಿ ಆಗಮಿಸಿದ್ದ ಸಚಿವ ಸತೀಶ್ ಜಾರಕಿಹೊಳಿರವರಿಗೆ ಮನವಿ ಸಲ್ಲಿಸಿ ಐತಿಹಾಸಿಕ ಚಿತ್ರದುರ್ಗ ಕೋಟೆಯನ್ನು ರಾಜವೀರ ಮದಕರಿನಾಯಕ ಆಳಿರುವುದರಿಂದ ಚಿತ್ರದುರ್ಗಕ್ಕೆ ತನ್ನದೆ ಆದ ಗತ ವೈಭವವಿದೆ. ಹಾಗಾಗಿ ಪ್ರತಿ ವರ್ಷವೂ ದುರ್ಗೋತ್ಸವ ಆಚರಿಸಿದರೆ ಚಿತ್ರದುರ್ಗದ ಇತಿಹಾಸ ಸಂಸ್ಕøತಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ವಿನಂತಿಸಿದರು.

ನಾಯಕ ಸಮಾಜದ ಮುಖಂಡರುಗಳಾದ ಎ.ತಿಪ್ಪೇಸ್ವಾಮಿ, ಎಸ್.ಮಂಜುನಾಥ, ವೆಂಕಟೇಶ್, ಅಶೋಕ್‍ಬೆಳಗಟ್ಟ, ರವಿ ಈ ಸಂದರ್ಭದಲ್ಲಿ ಹಾಜರಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks