ಡಿಸೆಂಬರ್ 1ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವ

 

ಚಿತ್ರದುರ್ಗ,(ನ.29): ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪುಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 01ರಂದು ಮಧ್ಯಾಹ್ನ 1 ಗಂಟೆಯಿಂದ ಹಿರೇಕೆರೆಯಲ್ಲಿ “ಶ್ರೀ ಗುರು ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವ”  ನಡೆಯಲಿದೆ.

ಅಂದು ಸಂಜೆ 6 ಗಂಟೆಯಿಂದ ಒಳಮಠ, ಹೊರಮಠ ಮತ್ತು ಏಕಾಂತಸ್ವಾಮಿ ಮಠ ಹಾಗೂ ಶ್ರೀ ಈಶ್ವರ ದೇವಸ್ಥಾನ ಒಳಗೊಂಡಂತೆ “ಲಕ್ಷ ದೀಪೋತ್ಸವ ಕಾರ್ಯಕ್ರಮ” ಹಾಗೂ ಶ್ರೀ ಗುರು ತಿಪ್ಪೇರುದ್ರಸ್ವಾಮಿ “ಬೆಳ್ಳಿ ರಥೋತ್ಸವ” ನಡೆಯಲಿದೆ.

ಡಿಸೆಂಬರ್ 02ರಂದು ದೊಡ್ಡ ಕಾರ್ತಿಕೋತ್ಸವ (ಏಕಾಂತೇಶ್ವರ ಸ್ವಾಮಿ ಕಾರ್ತಿಕೋತ್ಸವ) ನಡೆಯಲಿದೆ. ಡಿಸೆಂಬರ್ 16ರಂದು ಧನುರ್ಮಾಸ ಪೂಜಾ ಪ್ರಾರಂಭ, ತ್ರಿಕಾಲ ಪೂಜೆ, 2023ರ ಜನವರಿ 14ರಂದು ಉತ್ತರಾಯಣ ಪುಣ್ಯಕಾಲ ಧನುರ್ಮಾಸ ಪೂಜೆ ಮುಕ್ತಾಯವಾಗಲಿದೆ.

ವಿಶೇಷ ಆಹ್ವಾನಿತರಾಗಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ಶಾಸಕರಾದ ಟಿ.ರಘುಮೂರ್ತಿ, ಜಿ.ಹೆಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಗೂಳಿಹಟ್ಟಿ ಡಿ.ಶೇಖರ್, ಪೂರ್ಣಿಮಾ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ ಸೇರಿದಂತೆ ನಾಯಕನಟ್ಟಿ ಪಟ್ಟಣ ಪಂಚಾಯಿತಿ ಸರ್ವ ಸದಸ್ಯರ ನೇತೃತ್ವದಲ್ಲಿ ಕಾರ್ತಿಕೋತ್ಸವ, ತೆಪ್ಪೋತ್ಸವ ಮತ್ತು ಲಕ್ಷ ದೀಪೋತ್ಸವಗಳ ಹಾಗೂ ಬೆಳ್ಳಿ ರಥೋತ್ಸವಗಳ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

2 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

3 hours ago