Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದ್ದೂರಿಯಾಗಿ ಜರುಗಿದ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ | 61 ಲಕ್ಷಕ್ಕೆ ಮುಕ್ತಿ ಭಾವುಟ ಹರಾಜು

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 26 :  ನಾಯಕನಹಟ್ಟಿಯ ಶ್ರೀ ಗುರು‌ ತಿಪ್ಪೇರುದ್ರಸ್ವಾಮಿ ರಥೋತ್ಸವ ಮಂಗಳವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.

ರಥೋತ್ಸವಕ್ಕೆ ಬೆಳಿಗ್ಗೆಯಿಂದಲೇ ಲಕ್ಷಾಂತರ ಭಕ್ತರು ಸಾಗರೋಪದಿಯಲ್ಲಿ ಸೇರಿದ್ದರು. ಪವಾಡಗಳ ಮೂಲಕ ಮಧ್ಯ ಕರ್ನಾಟಕ ಜನಮಾನದಲ್ಲಿ ನೆಲೆ ನಿಂತಿರುವ ಶ್ರೀ ಸ್ವಾಮಿಯ ರಥೋತ್ಸವ ಮಧ್ಯಾಹ್ನ 3.15 ಗಂಟೆಗೆ ಚಿತ್ತಾ ನಕ್ಷತ್ರದಲ್ಲಿ ಭಕ್ತರು ಎಳೆದರು. ಈ ವೇಳೆ ಸಾಹಸ್ರಾರು ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿಭಾವದ ಸಮರ್ಪಣೆ ಅರ್ಪಿಸಿದರು.

ಶ್ರೀ ತಿಪ್ಪೇರುದ್ರಸ್ವಾಮಿಯ ಜಾತ್ರೆಯ ಮುಕ್ತಿ ಬಾವುಟ ಹರಾಜು ಪ್ರಕ್ರಿಯೆ ಪ್ರಕ್ರಿಯೆಯಲ್ಲಿ ದೇವರ ಮುಕ್ತಿ ಬಾವುಟ ಪಡೆಯಲು ಹಲವಾರು ಭಾಗಿಯಾಗಿದ್ದರು. ಅಂತಿಮವಾಗಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಈ ಬಾರಿಯ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಮುಕ್ತಿ ಬಾವುಟವನ್ನು ಹರಾಜಿನಲ್ಲಿ ರೂ.61 ಲಕ್ಷಕ್ಕೆ ಕೂಗಿ ತಮ್ಮದಾಗಿಸಿಕೊಂಡರು. ಕಳೆದ ವರ್ಷವೂ ಸಚಿವರೇ  ಹರಾಜಿನಲ್ಲಿ ರೂ.55 ಲಕ್ಷಕ್ಕೆ ಮುಕ್ತಿ ಬಾವುಟ ಪಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಹೊರಮಠ ಹಾಗೂ ಒಳಮಠ ಎರಡೂ ಕಡೆಗಳಲ್ಲಿ ಬೆಳಗ್ಗೆಯಿಂದಲೇ ಬಿಡುವಿಲ್ಲದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುಳಕಿತರಾದರು.

ಬಳ್ಳಾರಿ, ರಾಯಚೂರು, ತುಮಕೂರು, ಕೊಪ್ಪಳ, ಗದಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಅಕ್ಕಪಕ್ಕದ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯದಿಂದಲೂ ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.

ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಕ್ರಮಕೈಗೊಂಡಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

error: Content is protected !!