Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಯಕನಹಟ್ಟಿ | ದೊರೆಗಳಹಟ್ಟಿಯಲ್ಲಿ ಅದ್ದೂರಿ ಶ್ರೀ ಚೌಡೇಶ್ವರಿ ದೇವಿಯ ಜಾತ್ರೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ನಾಯಕನಹಟ್ಟಿ, ಫೆಬ್ರವರಿ.06 : ನೆಲಗೇತನಹಟ್ಟಿ ಗ್ರಾ.ಪಂ. ವ್ಯಾಪ್ತಿಯ ದೊರೆಗಳಹಟ್ಟಿಯಲ್ಲಿ ಮಂಗಳವಾರ ಶ್ರೀ ಚೌಡೇಶ್ವರಿ ದೇವಿ ಜಾತ್ರೋತ್ಸವ ಸಂಭ್ರಮ ಸಡಗರದಿಂದ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರಗಿತು.

ಗ್ರಾ. ಪಂ. ಸದಸ್ಯ ಬಂಗಾರಪ್ಪ ಮಾತನಾಡಿ ನಮ್ಮ ದೊರೆಗಳಹಟ್ಟಿ ಹಿಂದೆ ಪಾಳೇಗಾರರು ಆಳ್ವಿಕೆ ಮಾಡಿದಂತಹ ಗ್ರಾಮ ಗ್ರಾಮದಲ್ಲಿ ಶ್ರೀ  ಚೌಡೇಶ್ವರಿ ದೇವಿ ಹಲವು ಪವಾಡಗಳ ಹಾಗೂ ಮಹಿಮೆಗಳ ಮೂಲಕ ಪ್ರಸಿದ್ಧಿ ಪಡೆದಿರುವ ಶ್ರೀ ಚೌಡೇಶ್ವರಿ ದೇವಿ ಜಾತ್ರೆ ಸುತ್ತಮುತ್ತಲ ಗ್ರಾಮಗಳ ಆರಾಧ್ಯ ದೇವತೆಯಾಗಿದ್ದಾಳೆ ಇನ್ನೂ ಶ್ರೀ ಚೌಡೇಶ್ವರಿ ದೇವಿಯ ಜಾತ್ರೆಯನ್ನು ಗ್ರಾಮಸ್ಥರು ಪ್ರತಿ ವರ್ಷವೂ ಆಚರಣೆ ಮಾಡುತ್ತಾ ಬಂದಿದ್ದಾರೆ.
ಬುಡಕಟ್ಟು ಸಂಸ್ಕೃತಿ ಗ್ರಾಮದಲ್ಲಿ ಇಂದಿಗೂ  ಅನಾವರಣಗೊಳ್ಳಲಿದೆ ಎಂದರು.

ಪಿ. ಟಿ. ಕಾರ್ತಿಕ್ ಪಾಳೆಗಾರ್ ಮಾತನಾಡಿ ಪೂರ್ವಜರ ಕಾಲದಿಂದಲೂ ಇಲ್ಲಿ ಬುಡಕಟ್ಟು ಸಂಸ್ಕೃತಿಯ ಆಚಾರ-ವಿಚಾರಗಳು ಇನ್ನೂ ಜೀವಂತವಾಗಿರಲು ಶ್ರೀ ಚೌಡೇಶ್ವರಿ ದೇವಿ ಕಾರಣ ಪ್ರತಿ ವರ್ಷವೂ ನಮ್ಮ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ದೇವಿಯ ಅಗ್ನಿ ಕೆಂಡೋತ್ಸವ ನಡೆಯುತ್ತದೆ, ಸುತ್ತಮುತ್ತಲಿನ ಎಲ್ಲಾ ಗ್ರಾಮಸ್ಥರು ಈ ಒಂದು ಜಾತ್ರೆಯಲ್ಲಿ ಆಗಮಿಸಿರುವುದು ತುಂಬಾ ಸಂತೋಷದ ವಿಷಯ ಶ್ರೀ ಚೌಡೇಶ್ವರಿ ದೇವಿ ಆಶೀರ್ವಾದ ಸದಾ ಈ ಗ್ರಾಮದ ಜನರ ಮೇಲೆ ಮತ್ತು ಸುತ್ತಮುತ್ತಲ ಹಳ್ಳಿಯ ಜನರ ಮೇಲೆ ಇರಲಿ ಎಂದು ಶುಭ ಹಾರೈಸಿದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಬಂಗಾರಯ್ಯ, ಕೆ ಬಿ ಬೋಸಯ್ಯ, ಡಿ. ಬಿ. ಬೋರಯ್ಯ, ಚಂದ್ರಶೇಖರ್, ಪಿ ಟಿ ರುದ್ರಮುನಿ, ನಿರಂಜನ್ ಮೂರ್ತಿ ,ಪಿ ಎಚ್ ತಿಪ್ಪೇಸ್ವಾಮಿ, ಆರ್ ಎಸ್ ರವೀಂದ್ರ, ವೈ ಒ. ಮಂಜುನಾಥ್ (ಗೂಳಿ), ವೈ ಬಿ ತಿಪ್ಪೇಸ್ವಾಮಿ, ಮಣಿಕಂಠ, ರಂಗಸ್ವಾಮಿನಾಯಕ, ಚಿನ್ನಬೋಸಯ್ಯ, ವೈ ಸಿ ಮಂಜುನಾಥ್, ದೊರೆ ಬಸವರಾಜ್ ನಾಯಕ, ಬಿ ಶ್ರೀಧರ್ ,ಪೂಜಾರಿ ಮಲ್ಲಿಕಾರ್ಜುನ್, ಗೋಪಾಲಸ್ವಾಮಿ, ಮನೋಜ್ ಸೇರಿದಂತೆ ಗ್ರಾಮಸ್ಥರು ಸುತ್ತಮುತ್ತಲಿನ ಹಳ್ಳಿಗಳ ಗ್ರಾಮಸ್ಥರು ಭಕ್ತಾದಿಗಳು ಇದ್ದರು

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment