Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ : ಚೆಕ್ ಪೋಸ್ಟ್,  ಪಾರ್ಕಿಂಗ್ ವ್ಯವಸ್ಥೆ, ಪೊಲೀಸ್ ಸಿಬ್ಬಂದಿ ನೇಮಕ ಕುರಿತು ಮಹತ್ವದ ಮಾಹಿತಿ ಇಲ್ಲಿದೆ…!

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಫೆ.04) : ಭಕ್ತಾಧಿಗಳಿಗೆ ಅನುಕೂಲವಾಗುವಂತೆ ದೇಗುಲದ ಸಮೀಪದಲ್ಲಿಯೇ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಳೆದ ವರ್ಷ ದೂರದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದರಿಂದಾಗಿ ವಯೋವೃದ್ಧರು, ಮಹಿಳೆ, ಮಕ್ಕಳು, ಗರ್ಭಿಣಿಯರು ರಥೋತ್ಸವ ವೀಕ್ಷಣೆಗೆ ತೆರಳಲು ತುಂಬಾ ತೊಂದರೆ ಅನುಭವಿಸಿರುವುದು ಗಮನಕ್ಕೆ ಬಂದಿದೆ.  ಹಾಗಾಗಿ ಈ ಬಾರಿ ದೇಗುಲದ ಸಮೀಪದಲ್ಲಿಯೇ ಪಾರ್ಕಿಗ್ ವ್ಯವಸ್ಥೆ ಮಾಡಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಬೇಕು ಎಂದರು.

ಜಾತ್ರೆ ಒಳಗಾಗಿ  ಪಟ್ಟಣ ಸಂಪರ್ಕಿಸುವ ರಸ್ತೆಗಳನ್ನು ತಾತ್ಕಾಲಿಕ ಸರಿಪಡಿಸಬೇಕು. ಇದುವರೆಗೂ ಕ್ರಮಬದ್ಧವಾಗಿ ಜಾತ್ರೆ ಮಹೋತ್ಸವ ಆಯೋಜಿಸಲಾಗಿದೆ. ಕಳೆದ ಬಾರಿ ಎದುರಿಸಿದ ತೊಂದರೆಗಳನ್ನು ಈ ಬಾರಿ ಪರಿಹರಿಸಬೇಕು ಎಂದು ಸಚಿವ ಶ್ರೀರಾಮುಲು ಹೇಳಿದರು.

ರಸ್ತೆ ಗುಂಡಿ ಮುಚ್ಚಲು ಸೂಚನೆ: ರಥ ಬೀದಿ ರಸ್ತೆ ಸೇರಿದಂತೆ ಪಟ್ಟಣಕ್ಕೆ ಆಗಮಿಸುವ ಎಲ್ಲ ರಸ್ತೆ ಮಾರ್ಗಗಳಲ್ಲಿ ಬಿದ್ದಿರುವ ಗುಂಡಿಯನ್ನು ತಕ್ಷಣವೇ ಮುಚ್ಚುವ ಕೆಲಸ ಮಾಡಬೇಕು. ರಸ್ತೆಯ ಪಕ್ಕದಲ್ಲಿರುವ ಜಾಲಿಯನ್ನು ತೆರವುಗೊಳಿಸಬೇಕು, ನಗರದಾದ್ಯಂತ ಬೀದಿದೀಪದ ವ್ಯವಸ್ಥೆ ಆಗಬೇಕು  ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ತಾಕೀತು ಮಾಡಿದರು.

7 ಕಡೆ ಚೆಕ್ ಪೋಸ್ಟ್‌, ಪಾರ್ಕಿಂಗ್ : ಜಾತ್ರಾ ಮಹೋತ್ಸವ ಅಂಗವಾಗಿ 7 ಕಡೆ ಚೆಕ್ ಪೋಸ್ಟ್‌ ಹಾಗೂ ಪಾರ್ಕಿಂಗ್ ಸ್ಥಾಪಿಸಲಾಗುವುದು. 30 ಕಡೆ ಸಿಸಿ ಟಿವಿ ಕ್ಯಾಮೆರಾ, 3 ಕಡೆ ವಾಚ್ ಟವರ್, 22 ಕಡೆ ಸಹಾಯವಾಣಿ ಕೇಂದ್ರ ಸ್ಥಾಪನೆ, ಡಿವೈಎಸ್‍ಪಿ, ಸಿಪಿಐ, ಪಿಎಸ್‍ಐ, ಕಾನ್ಸ್‌ಟೇಬಲ್ ಸೇರಿದಂತೆ 2550 ಜನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಚಳ್ಳಕೆರೆ ತಹಶೀಲ್ದಾರ್ ರೆಹಮಾನ್ ಪಾಷಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ದೇಗುಲ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಪ್ಪ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರಾದ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!