Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಯಕನಹಟ್ಟಿ ಪಟ್ಟಣ ಪಂಚಾಯಿತಿ: ಆಸ್ತಿ ತೆರಿಗೆ ಪರಿಷ್ಕರಣೆ…!

Facebook
Twitter
Telegram
WhatsApp

 

 

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮಾರ್ಚ್.30) : ಪೌರಾಡಳಿತ ನಿರ್ದೇಶನಾಲಯ ಆದೇಶದಂತೆ ಕರ್ನಾಟಕ ಸ್ಟಾಂಪ್‍ಗಳ ಅಧಿನಿಯಮ 1957ರ 45 ಬಿ ಪ್ರಕರಣದಡಿಯಲ್ಲಿ ಪ್ರಕಟಿಸಲಾಗುವ ಚಾಲ್ತಿ ಸಾಲಿನ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆಗಳ ಆಧಾರದ ಮೇರೆಗೆ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಬೇಕಾಗಿರುತ್ತದೆ.

2023-24ನೇ ಆರ್ಥಿಕ ಸಾಲಿನಲ್ಲಿ ಮಾರುಕಟ್ಟೆ ದರ ಸೂಚಿಗಳು ಪರಿಷ್ಕರಣೆ ಆಗದಿದ್ದಲ್ಲಿ ಶೇ.3 ರಿಂದ ಶೇ.5ರಷ್ಟು ಆಸ್ತಿ ತೆರಿಗೆ ದರ ಪರಿಷ್ಕರಣೆ ಮಾಡುವ ಹಾಗೂ ಸ್ಥಳೀಯ ಸಂಸ್ಥೆಗಳು ನೀರಿನ ದರವನ್ನು ಪ್ರತಿ ಮೂರು ವರ್ಷಗಳಿಗೊಮ್ಮೆ ಒಂದು ಬಾರಿ ನೀರಿನ ದರ ಪರಿಷ್ಕರಣೆ ಮಾಡುವ ಬಗ್ಗೆ 2023ರ ಮಾರ್ಚ್ 20ರಂದು ನಡೆದ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿಗಳ ಸಭೆಯಲ್ಲಿ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆಗಳನ್ನು 2023-24ನೇ ಸಾಲಿಗೆ ಪರಿಷ್ಕರಣೆಯಾಗದಿರುವ ಕಾರಣ 2018-19ನೇ ಸಾಲಿನ ಮಾರುಕಟ್ಟೆ ಮಾರ್ಗಸೂಚಿ ಬೆಲೆಯನ್ನು ಚಾಲ್ತಿ ಸಾಲಿನ ಮಾರ್ಗಸೂಚಿ ಬಲೆ ಎಂದು ಉಪನೊಂದಣಾಧಿಕಾರಿಗಳು ದೃಢೀಕರಿಸಿರುವುದನ್ನು ಪರಿಗಣಿಸಲಾಗಿರುತ್ತದೆ.

2018-19 ನೇ ಸಾಲಿನ ಮಾರ್ಗಸೂಚಿ ಬೆಲೆ ಆಧಾರದಲ್ಲಿ  ನಿವೇಶನಗಳ ಮಾರ್ಗಸೂಚಿ ಬೆಲೆಗಳು ಕಟ್ಟಡ ನಿರ್ಮಾಣದ ಮಾರುಕಟ್ಟೆ  ಮಾರ್ಗಸೂಚಿ ಬೆಲೆಗಳಿಗೆ 2023-24 ನೇ ಅವಧಿಗೆ ಶೇ. 3 ರಿಂದ ಶೇ.5ರ ಮಿತಿಯಲ್ಲಿ, ನಿವೇಶನ ಶೇ.3, ವಸತಿ ಶೇ.3, ವಾಣಿಜ್ಯ ಶೇ.4, ವಾಣಿಜ್ಯೇತರ ಶೇ.3 ಹಾಗೂ ಕೈಗಾರಿಕೆ ಶೇ.3.5 ದರಗಳನ್ನು ನಿಗಧಿಪಡಿಸಲು ಹಾಗೂ  ಸರ್ಕಾರದ  ಆದೇಶದನ್ವಯ ನೀರಿನ ದರವನ್ನು ಪ್ರತಿ 3 ವರ್ಷಗಳಿಗೊಮ್ಮೆ ಒಂದು ಬಾರಿ ಪರಿಷ್ಕರಣೆಯಂತೆ 2020-21ನೇ ಸಾಲಿನಲ್ಲಿ ನಿಗಧಿಪಡಿಸಿದ ನೀರಿನ ತೆರಿಗೆಯ ದರದ ಮೇಲೆ ವಸತಿ ವಾಣಿಜ್ಯ ಕೈಗಾರಿಕೆಗಳ ನೀರಿನ ತೆರಿಗೆ ಮೇಲೆ ಶೇ.3 ರಷ್ಟು ನಿಗಧಿಪಡಿಸಲು ಸಭೆಯಲ್ಲಿ ತೀರ್ಮಾನಿಸಿದಂತೆ 2023ರ ಏಪ್ರಿಲ್ 1 ರಿಂದ ಜಾರಿಗೆ ತರಲಾಗುವುದು ಎಂದು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎನ್. ಭಾಗ್ಯಮ್ಮ ತಿಳಿಸಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!