Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಯನಹಟ್ಟಿ ಜಾತ್ರೆ : ಅಂತಿಮ ಸಿದ್ಧತೆಗಳ ಪರಿಶೀಲನೆ ನಡೆಸಿದ ಉಪವಿಭಾಗಧಿಕಾರಿ

---Advertisement---

 ಚಿತ್ರದುರ್ಗ. ಮಾ.25: ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಮಾರ್ಚ್ 26 ರಂದು ಮಂಗಳವಾರ ನಡೆಯಲಿದೆ. ಜಾತ್ರೆಯ ಅಂತಿಮ ಹಂತದ ಸಿದ್ಧತೆಗಳ ಕುರಿತು ಉಪವಿಭಾಗಧಿಕಾರಿ ಎಂ.ಕಾರ್ತಿಕ್ ಸೋಮವಾರ ಪರಿಶೀಲನೆ ನಡೆಸಿದರು. 

ಐತಿಹಾಸಿಕ ನಾಯಕನಹಟ್ಟಿ ಜಾತ್ರೆಗೆ ನಾಡಿನ ಹಲವು ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತಾಧಿಕಾರಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ, ಕುಡಿಯುವ ನೀರಿಗೆ ವಿಶೇಷವಾದ ವ್ಯವಸ್ಥೆ ರೂಪಿಸಲಾಗಿದೆ. ತಿಪ್ಪೇರುದ್ರಸ್ವಾಮಿ ದೇವಾಲಯದ ಒಳಮಠ ಮತ್ತು ಹೊರಮಠದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿಟ್ಟಿನಲ್ಲಿ ಎರಡೂ ದೇವಾಲಯದ ಆವರಣ ಸ್ವಚ್ಛಗೊಳಿಸಲಾಗಿದೆ.

ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎರಡೂ ದೇವಾಲಯಗಳ ಆವರಣದಲ್ಲಿ ಬೃಹತ್ ಚಪ್ಪರದ ವ್ಯವಸ್ಥೆ ಮಾಡಲಾಗಿದೆ. ನೆರೆಯ ಆಂದ್ರ ಪ್ರದೇಶ, ತೆಲಂಗಾಣ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳು ಹಾಗೂ ರಾಜ್ಯದ ಮೂಲೆ ಮೂಲೆಯಿಂದ ಭಕ್ತಾಧಿಗಳು ಆಗಮಿಸುತ್ತಾರೆ. ಈ ಹಿನ್ನಲೆಯಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ವಸ್ತುಪ್ರದರ್ಶನ ಮಳಿಗೆಗಳನ್ನು ತೆರೆಯಲಾಗಿದೆ. ಈ ಎಲ್ಲಾ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಎಂ.ಕಾರ್ತಿಕ್ ಸೋಮವಾರ ಪರಿಶೀಲಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment