Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಯಕ ಸಮುದಾಯ ಬಿ.ಎನ್.ಚಂದ್ರಪ್ಪ, ಪ್ರಭಾ ಮಲ್ಲಿಕಾರ್ಜನ್ ರವರನ್ನು ಬೆಂಬಲಿಸಲಿ : ಎನ್.ಡಿ.ಕುಮಾರ್ ಮನವಿ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏ.25 : ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಎನ್.ಚಂದ್ರಪ್ಪ, ಮತ್ತು ದಾವಣಗೆರೆ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜನ್ ಅವರನ್ನು ಗೆಲ್ಲಿಸಲು ಕಾಯಕ ಸಮುದಾಯ ಮುಂದಾಗಬೇಕು ಎಂದು ನಗರ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್ ಮನವಿ ಮಾಡಿದರು.

ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ನೊಂದ ಸಮಾಜಗಳ ಪರವಾಗಿ ಕಾಂಗ್ರೆಸ್ ಪಕ್ಷ ಬಿಟ್ಟರೆ, ಬೇರೆ ಯಾವುದೇ ಪಕ್ಷಗಳು ಯೋಜನೆಗಳನ್ನು ನೀಡಿಲ್ಲ. ಸವಿತಾ ಸಮಾಜ, ಮಡಿವಾಳ, ಯಾದವ, ಈಡಿಗ, ನೇಕಾರ ವಿಶ್ವಕರ್ಮ, ಗಾಣಿಗ, ಉಪ್ಪಾರ ಹೀಗೆ ಅನೇಕ ಸಮಾಜಗಳಿಗೆ ಸಮಾಜದ ಮಹಾಪುರುಷರ ಜಯಂತಿ, ನಿಗಮ ಸ್ಥಾಪನೆ, ನಿಗಮ ಮಂಡಳಿಗಳಲ್ಲಿ ಸ್ಥಾನ ಸೇರಿದಂತೆ ರಾಜಕೀಯವಾಗಿ ಸ್ಥಾನಮಾನ ನೀಡಿದೆ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಎನ್.ಡಿ.ಕುಮಾರ್ ಎಂದರು.

2013ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ನೊಂದ ಸಮಾಜಗಳಿಗೆ ಸಾಕಷ್ಟು ಯೋಜನೆಗಳನ್ನು ನೀಡಿದ್ದಾರೆ. ಆದ್ದರಿಂದ ಹಿಂದುಳಿದ ಸಮುದಾಯಗಳನ್ನು ಬೆಂಬಲಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಗ್ಯಾರಂಟಿ ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದಿದೆ. ಶೋಷಿತರ ಪರವಿರುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಮುಖ್ಯ ಎಂದರು.

 

ಇಂದು ಚಿತ್ರದುರ್ಗ ನಗರದ ನಾಲ್ಕನೇ ವಾರ್ಡಿನಲ್ಲಿ ಚಿತ್ರದುರ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷರಾದ ಎನ್ ಡಿ ಕುಮಾರ್ ಹಾಗೂ ಮಾಜಿ ನಗರಸಭೆ ಅಧ್ಯಕ್ಷರಾದ ಸಿಟಿ ಕೃಷ್ಣಮೂರ್ತಿ ರವರ ನೇತೃತ್ವದಲ್ಲಿ ಚಿತ್ರದುರ್ಗ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ ಎನ್ ಚಂದ್ರಪ್ಪನವರ ಪರ ಮನೆ ಮನೆಗೆ ತೆರಳಿ ಗ್ಯಾರಂಟಿ ಕಾರ್ಡುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಾರ್ಡಿನ ಪ್ರಮುಖರಾದ ಮೈಲಾರಪ್ಪ, ಲಿಂಗರಾಜು, ಗಿರೀಶ,ಸತೀಶ್ ಹಾಗೂ ಇನ್ನೂ ಅನೇಕ ಮಂದಿ ಹಾಜರಿದ್ದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment