Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎನ್ ಡಿ ಆರ್ ಎಫ್ ಅನುದಾನ ಗ್ಯಾರಂಟಿಗಳಿಗೆ ಬಳಸುತ್ತಿಲ್ಲ : ಸಿಎಂ ಸ್ಪಷ್ಟನೆ

---Advertisement---

 

ಬೆಳಗಾವಿ, ಅಕ್ಟೋಬರ್ 4: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ.ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉತ್ತರಿಸುತ್ತಾ, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ , ದೆಹಲಿ, ಮಹಾರಾಷ್ಟ್ರ, ಮದ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು , ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ , ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದರು.

ಬಿಮ್ಸ್ ಆಸ್ಪತ್ರೆ-ಖಾಸಗಿ ನಿರ್ವಹಣೆ ಇಲ್ಲ :
ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ಶಂಕುಸ್ಥಾಪನೆ ಹಾಗೂ ಇಂದು ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿಯ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಲಾಗಿಲ್ಲ ಎಂದರು.

ಕಾಂಗ್ರೆಸ್ ನ ಆಂತರಿಕ ವಿಚಾರದಲ್ಲಿ ಬಿಜೆಪಿ ತಲೆಕೆಡಿಸಿಕೊಳ್ಳಬೇಕಿಲ್ಲ :
ಶಾಸಕ ಸಿ.ಟಿ.ರವಿಯವರು ಮುಖ್ಯಮಂತ್ರಿಯವರ ವಿಚಾರದಲ್ಲಿ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಹುದ್ದೆ ವಿಷಯ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ