Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗದಲ್ಲಿ ಕನ್ನಡ ಭನವ ನಿರ್ಮಾಣಕ್ಕೆ ಅಗತ್ಯ ನೆರವು : ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಭರವಸೆ

---Advertisement---

 

ಸುದ್ದಿಒನ್, ಚಿತ್ರದುರ್ಗ : ಜಿಲ್ಲಾ ಕೇಂದ್ರದಲ್ಲಿ ಕನ್ನಡ ಭನವ ನಿರ್ಮಾಣಕ್ಕೆ ಅಗತ್ಯವಾದ ಅನುದಾನ ಒದಗಿಸಿಕೊಡುವುದಾಗಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣ ಸ್ವಾಮಿ ಭರವಸೆ ನೀಡಿದ್ದಾರೆ.

ತಳಕು ಸಮೀಪದ ಹೊಸಹಳ್ಳಿ ಗ್ರಾಮದಲ್ಲಿ ಗುರುವಾರ ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಯವರ ಮನವಿ ಸ್ವೀಕರಿಸಿ ಮಾತನಾಡಿದರು.

ನೆರೆಯ ಜಿಲ್ಲೆಗಳಲ್ಲಿ ಕನ್ನಡ ಭವನಗಳಿವೆ. ಆದರೆ ಜಿಲ್ಲಾ ಕೇಂದ್ರದಲ್ಲಿ ಕನ್ನಡ ಭವನವಿಲ್ಲ. ಈ ಬಗ್ಗೆ ಮುಂದಿನ ಜಿಲ್ಲಾ ಸಭೆಗಳಲ್ಲಿ ಚರ್ಚೆ ನಡೆಸಲಾಗುವುದು. ಈ ಬಗ್ಗೆ ಜಿಲ್ಲೆಯ ಶಾಸಕರು ಮತ್ತು ಸಚಿವರ ಜತೆಗೆ ಚರ್ಚೆ ನಡೆಸಲಾಗುವುದು. ನಂತರ ಇದಕ್ಕೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಮಾತನಾಡಿ, ಕನ್ನಡ ಭವನಕ್ಕೆ ಅಗತ್ಯವಾದ ವಿಶಾಲ ನಿವೇಶನವಿದೆ. ನಗರದ ಪಿಳ್ಳೇಕೇರನಹಳ್ಳಿ ಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ನಿವೇಶನ ಕಸಾಪ ಹೆಸರಿನಲ್ಲಿದೆ. ಜಿಲ್ಲಾಧಿಕಾರಿಗಳು ಹಾಗೂ ಕಸಾಪ ಜಿಲ್ಲಾಧ್ಯಕ್ಷರ ಜಂಟಿ ಖಾತೆಯಲ್ಲಿ 20 ಲಕ್ಷ ರೂಗಳ ಹಣವಿದೆ. ಸುಮಾರು 2 ಕೋಟಿ ವೆಚ್ಚದ ಕನ್ನಡ ಭವನದ ಉದ್ದೇಶವನ್ನು ಕಸಾಪ ಹೊಂದಿದೆ. ಸರಕಾರದ ನಿಧಿ, ಸಂಸದರು, ಶಾಸಕರು ತಮ್ಮ ಅನುದಾನವನ್ನು ಉದಾರವಾಗಿ ಒದಗಿಸಬೇಕು ಎಂದರು.

ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಹಾಪ್ ಕಾಮ್ಸ್ ಅಧ್ಯಕ್ಷ ಎಂ.ವೈ.ಟಿ.ಸ್ವಾಮಿ, ಮುಖಂಡ ಶಿವಣ್ಣ ಮತ್ತಿತರರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...