Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

NEET-2022 result : ಟಾಪ್ 10 ರ‍್ಯಾಂಕ್ ಪಡೆದವರ ಪಟ್ಟಿಯಲ್ಲಿ ಕರ್ನಾಟಕದ ಮೂವರು

Facebook
Twitter
Telegram
WhatsApp

ಬೆಂಗಳೂರು : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) The National Testing Agency (NTA) ಬುಧವಾರ ತಡರಾತ್ರಿ NEET-2022 ಫಲಿತಾಂಶವನ್ನು ಪ್ರಕಟಿಸಿದ್ದು, ಕರ್ನಾಟಕದ ಮೂವರು ವಿದ್ಯಾರ್ಥಿಗಳು ALL INDIA RANKING (AIR) ಪಟ್ಟಿಯಲ್ಲಿ ಮೊದಲ ಹತ್ತರೊಳಗೆ ಸ್ಥಾನ ಪಡೆದಿದ್ದಾರೆ.

ಹೃಷಿಕೇಶ್ ನಾಗಭೂಷಣ ಗಂಗೂಲೆ ಅವರು ಎಐಆರ್ ಪಟ್ಟಿಯಲ್ಲಿ ಕರ್ನಾಟಕದ ಟಾಪರ್ ಮತ್ತು ಹತ್ತರಲ್ಲಿ ಮೂರನೇ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಅವರು BNYS (ಬ್ಯಾಚುಲರ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್) ಮತ್ತು BVSC (ಬ್ಯಾಚುಲರ್ ಆಫ್ ವೆಟರ್ನರಿ ಸೈನ್ಸಸ್) ಸ್ಟ್ರೀಮ್‌ಗಳಲ್ಲಿ ಜುಲೈನಲ್ಲಿ ಘೋಷಿಸಲಾದ CET ಫಲಿತಾಂಶದಲ್ಲಿಯೂ ಟಾಪರ್ ಆಗಿದ್ದರು.

ನಂತರದ ಸ್ಥಾನದಲ್ಲಿ ರುಚಾ ಪವಾಶೆ ಅವರು ರಾಜ್ಯದ ಎರಡನೇ ಟಾಪರ್ ಮತ್ತು ಎಐಆರ್ ಪಟ್ಟಿಯಲ್ಲಿ 4 ನೇ ಟಾಪರ್ ಆಗಿದ್ದಾರೆ. ಮಹಿಳಾ ವಿಭಾಗದಲ್ಲಿ 2ನೇ AIR ಲಿಸ್ಟ್ ಟಾಪರ್ ಕೂಡ ಆಗಿದ್ದಾರೆ.

ಕೃಷ್ಣ ಎಸ್‌ಆರ್ ಅವರು ಕರ್ನಾಟಕದ 3ನೇ ಟಾಪರ್ ಮತ್ತು ಎಐಆರ್ ಪಟ್ಟಿಯಲ್ಲಿ 8ನೇ ಟಾಪರ್ ಆಗಿದ್ದಾರೆ. ಎಐಆರ್ ಪಟ್ಟಿಯಲ್ಲಿ ಕರ್ನಾಟಕದ ಒಂಬತ್ತು ವಿದ್ಯಾರ್ಥಿಗಳು ಟಾಪ್ 50ರಲ್ಲಿ ಸ್ಥಾನ ಪಡೆದಿದ್ದಾರೆ.

ಈ ವರ್ಷ ಕರ್ನಾಟಕದಿಂದ ಒಟ್ಟು 1,33,255 ವಿದ್ಯಾರ್ಥಿಗಳು NEET-2022 ಗೆ ನೋಂದಾಯಿಸಿಕೊಂಡಿದ್ದರು ಮತ್ತು ಅವರಲ್ಲಿ 1,22,423 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.  2022-23ರ ಶೈಕ್ಷಣಿಕ ವರ್ಷದಲ್ಲಿ ಒಟ್ಟು 72,262 ವಿದ್ಯಾರ್ಥಿಗಳು ವೈದ್ಯಕೀಯ ಸೀಟುಗಳಿಗೆ ಅರ್ಹತೆ ಪಡೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!