Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಮ್ಮಾ, ನನ್ನನ್ನು ಕ್ಷಮಿಸು ಎಂದು ವಿಡಿಯೋ ಮಾಡಿಟ್ಟು ನೀಟ್ ಅಭ್ಯರ್ಥಿ ಆತ್ಮಹತ್ಯೆ!

---Advertisement---

ಹಿಂಗೋಲಿ (ಮಹಾರಾಷ್ಟ್ರ): ವೈದ್ಯಕೀಯ ಪ್ರವೇಶಾತಿಗಾಗಿ ನಡೆಯುವ ನೀಟ್ (NEET) ಪರೀಕ್ಷೆಯ ಒತ್ತಡಕ್ಕೆ ಸಿಲುಕಿ 18 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಹಿಂಗೋಲಿಯಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿಯು ತನ್ನ ಮೊಬೈಲ್ನಲ್ಲಿ ಸಾರಿ ಅಮ್ಮ ಎಂದು ಕೈಮುಗಿದು ಕೇಳಿಕೊಳ್ಳುತ್ತಿರುವ ವಿಡಿಯೋವೊಂದನ್ನು ರೆಕಾರ್ಡ್ ಮಾಡಿದ್ದಾನೆ.

ಮೃತನನ್ನು ಸುಶೀಲ್ ಧಾಗೆ ಎಂದು ಗುರುತಿಸಲಾಗಿದೆ. ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯು ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ರದ್ದಾಗಿತ್ತು. ಆ ಬಳಿಕ ಜೂನ್ 21 ರಂದು ನಡೆದ ಮರುಪರೀಕ್ಷೆಗೆ ಸುಶೀಲ್ ಹಾಜರಾಗಿದ್ದ ಎಂದು ತಿಳಿದುಬಂದಿದೆ.

ತನ್ನ ಸಾವಿಗೂ ಮುನ್ನ ರೆಕಾರ್ಡ್ ಮಾಡಿದ 33 ಸೆಕೆಂಡುಗಳ ಭಾವುಕ ವಿಡಿಯೋದಲ್ಲಿ ಸುಶೀಲ್ ಕಣ್ಣೀರು ಹಾಕುತ್ತಾ ಅಮ್ಮನ ಬಳಿ ಕ್ಷಮೆಯಾಚಿಸಿದ್ದಾನೆ.ಅಮ್ಮ, ನಾನು ಇಂದು ನನ್ನ ಜೀವನವನ್ನು ಕೊನೆಗಾಣಿಸುತ್ತಿದ್ದೇನೆ. ಅಮ್ಮ, ನೀನು ಸ್ವಲ್ಪವೂ ಚಿಂತಿಸಬೇಡ. ನನ್ನ ಮುಂದಿನ ಜನ್ಮದಲ್ಲೂ ನಾನು ನಿನ್ನ ಗರ್ಭದಲ್ಲೇ ಹುಟ್ಟಿ ಬರುತ್ತೇನೆ, ಆಗ ನಿನಗೆ ಇಂತಹ ನೋವು ಕೊಡುವುದಿಲ್ಲ.

ನನ್ನನ್ನು ಕ್ಷಮಿಸಿಬಿಡು ಅಮ್ಮ. ಸುಮೇಧ್ ಜೊತೆ ಇರು. ನಿನ್ನ ಆರೋಗ್ಯವನ್ನು ಚೆನ್ನಾಗಿ ನೋಡಿಕೋ, ನನ್ನ ಬಗ್ಗೆ ಯೋಚಿಸಬೇಡ. ನಾನು ತೀವ್ರವಾದ ನೋವಿನಲ್ಲಿದ್ದೇನೆ… ನನಗೇನು ಮಾಡಲು ಸಾಧ್ಯವಾಗುತ್ತಿಲ್ಲ… ನನಗೇನೂ ಅರ್ಥವಾಗುತ್ತಿಲ್ಲ. ನನ್ನನ್ನು ಕ್ಷಮಿಸಿಬಿಡು ಅಮ್ಮ ಎಂದು ಕೈಮುಗಿದು ಬೇಡಿಕೊಂಡಿದ್ದಾನೆ. ಈ ವಿಡಿಯೋ ಕ್ಲಿಪ್ ಅನ್ನು ತನ್ನ ಕುಟುಂಬದವರಿಗೆ ಕಳುಹಿಸಿದ ನಂತರ ಆತ ಬುಧವಾರ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೊಲೀಸ್ ದೂರು ದಾಖಲಿಸಿರುವ ಸುಶೀಲ್ ಕುಟುಂಬಸ್ಥರು, ಜೂನ್ 21 ರಂದು ನಡೆದ ನೀಟ್ ಮರುಪರೀಕ್ಷೆಯು ತನಗೆ “ತುಂಬಾ ಕಷ್ಟಕರವಾಗಿತ್ತು” ಎಂದು ಆತ ಹೇಳಿದ್ದಾಗಿ ತಿಳಿಸಿದ್ದಾರೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಸುಮಾರು 1,004,000 ಪದವಿಪೂರ್ವ ವೈದ್ಯಕೀಯ ಸೀಟುಗಳಿಗಾಗಿ ಈ ನೀಟ್ ಪರೀಕ್ಷೆಯನ್ನು ಬರೆಯುತ್ತಾರೆ. ಮೇ 3 ರಂದು ನಡೆದಿದ್ದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮೇ 12 ರಂದು ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಈ ಹಗರಣದ ತನಿಖೆ ನಡೆಸಿದ ಸಿಬಿಐ (CBI), ಪುಣೆ ಮೂಲದ ಕೆಮಿಸ್ಟ್ರಿ ಉಪನ್ಯಾಸಕನಾಗಿದ್ದ ಕಿಂಗ್ ಪಿನ್ ನನ್ನು ಬಂಧಿಸಿತ್ತು. ತದನಂತರ ಜೂನ್ 21 ರಂದು ದೇಶಾದ್ಯಂತ ಮರುಪರೀಕ್ಷೆ ನಡೆಸಲಾಗಿತ್ತು. ಆದರೆ ಪರೀಕ್ಷೆಯ ಒತ್ತಡವನ್ನು ತಡೆದುಕೊಳ್ಳಲಾಗದೆ ಯುವ ವಿದ್ಯಾರ್ಥಿಯೊಬ್ಬ ಪ್ರಾಣ ಕಳೆದುಕೊಂಡಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಸಚಿವ ಪರಮೇಶ್ವರ್

ರಾಜ್ಯದ ಸಚಿವರಿಗೆ ಉಸ್ತುವಾರಿ ಜಿಲ್ಲೆ ಹಂಚಿಕೆ; ಕೋಟೆನಾಡು ಚಿತ್ರದುರ್ಗಕ್ಕೆ ಡಾ. ಜಿ. ಪರಮೇಶ್ವರ್ ಉಸ್ತುವಾರಿ

ಗ್ರಾಮೀಣ ಯುವಕ-ಯುವತಿಯರಿಗೆ ಸುವರ್ಣಾವಕಾಶ; ಜೂ. 27ಕ್ಕೆ ಉಚಿತ ಮೊಬೈಲ್ ರಿಪೇರಿ ತರಬೇತಿ ಸಂದರ್ಶನ

ನಮ್ಮ ನೀರು, ನಮ್ಮ ಹಕ್ಕು ಆಶಯದಡಿ ಮೂರು ರಾಜ್ಯಗಳ ರೈತರ ರಕ್ಷಣೆಗೆ ಐತಿಹಾಸಿಕ ತೀರ್ಮಾನ : ಸಿಎಂ ಡಿ.ಕೆ.ಶಿವಕುಮಾರ್

ಚಿತ್ರದುರ್ಗ ಜಿಲ್ಲೆಯ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಪ್ರತಿಷ್ಠಿತ ‘ಡಿಜಿ-ಐಜಿಪಿ ಪ್ರಶಸ್ತಿ’: ಎಸ್ ಪಿ ರಂಜಿತ್ ಕುಮಾರ್ ಬಂಡಾರು ಅಭಿನಂದನೆ

ತುಂಗಭದ್ರಾ ಜಲಾಶಯದ ನೂತನ ಗೇಟ್ ಗಳ ಲೋಕಾರ್ಪಣೆ, ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ; ಸಿಎಂ ಡಿ.ಕೆ. ಶಿವಕುಮಾರ್

ಪಿಎಫ್ ಗ್ರಾಹಕರ ಗಮನಕ್ಕೆ; ನಾಳೆಯಿಂದ 3 ದಿನ EPFO ಪೋರ್ಟಲ್ ತಾತ್ಕಾಲಿಕ ಬಂದ್, ಕ್ಲೈಮ್ ಸೇವೆಗಳಲ್ಲಿ ವ್ಯತ್ಯಯ!