Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೇಹಾ ಹಿರೇಮಠ ಹತ್ಯೆ ಪ್ರಕರಣ | ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ : ಎಸ್‍ಯುಸಿಐ(ಸಿ) ಒತ್ತಾಯ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 21 :ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆಯು ಅತ್ಯಂತ ಹೇಯ ಘಟನೆಯಾಗಿದ್ದು, ಇದರ ಆರೋಪಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕೆಂದು ಎಸ್‍ಯುಸಿಐ ಕಮ್ಯುನಿಸ್ಟ್ ಪಕ್ಷದ ರಾಜ್ಯ ಸಮಿತಿಯು ಆಗ್ರಹಿಸುತ್ತದೆ.

ಇದೇ ಸಂದರ್ಭದಲ್ಲಿ, ಈ ಪ್ರಕರಣಕ್ಕೆ ಕೋಮು ಮತ್ತು ಚುನಾವಣಾ ರಾಜಕೀಯದ ಬಣ್ಣವನ್ನು ನೀಡುತ್ತಿರುವ ವಿದ್ಯಮಾನವನ್ನು ಕೂಡ ಎಸ್‍ಯುಸಿಐ(ಸಿ) ತೀವ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಭಿನ್ನಮತ ಮತ್ತು ನಾಯಕತ್ವದ ಬಿಕ್ಕಟ್ಟಿನಲ್ಲಿರುವ ಬಿಜೆಪಿ ಪಕ್ಷಕ್ಕೆ ಜನರ ಮುಂದೆ ಪರಿಣಾಮಕಾರಿಯಾಗಿ ಹೇಳಿಕೊಳ್ಳುವ ವಿಷಯವೇನೂ ಇಲ್ಲದೆ ಸಪ್ಪಗಾಗಿತ್ತು.

ಇಂತಹ ಸಂದರ್ಭದಲ್ಲಿ ನಡೆದ ಈ ದುರ್ಘಟನೆಯನ್ನು ಬಿಜೆಪಿಯು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ. ಇದನ್ನು ಚುನಾವಣಾ ಆಯೋಗವು ಗಂಭೀರವಾಗಿ ಪರಿಗಣಿಸಿ, ಈ ವಿವಾದ ಕೋಮು ದಳ್ಳುರಿಗೆ ದಾರಿ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ.

ಸಮಾಜದಲ್ಲಿ ಒಟ್ಟಾರೆಯಾಗಿ ಪ್ರಧಾನವಾಗಿರುವ ಸ್ವಕೇಂದ್ರಿತ ಮನಸ್ಸು, ಹಿಂಸೆಯ ವೈಭವೀಕರಣ , ಪುರುಷಾಧಿಕಾರದ ಅಹಂ, ನೈತಿಕ ಅಧಃಪತನಗಳಿಂದ ಇಂತಹ ದುರಂತಗಳು ಸಂಭವಿಸುತ್ತಿದ್ದು, ಘಟನೆ ನಡೆದಾಗ ಪ್ರತಿಕ್ರಯಿಸುವುದು ಮಾತ್ರವಲ್ಲದೆ, ಇವುಗಳ ನಿಯಂತ್ರಣಕ್ಕೆ ಆಳುವ ಸರ್ಕಾರಗಳು ಮತ್ತು ಸಮಾಜ ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಸ್‍ಯುಸಿಐ(ಸಿ) ರಾಜ್ಯ ಕಾರ್ಯದರ್ಶಿ ಕಾಮ್ರೇಡ್ ಕೆ.ಉಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment