Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

---Advertisement---

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ.

ಇಂದು ಆರೋಪಿಯ ರಕ್ತದ ಮಾದರಿಯನ್ನು ತೆಗೆದುಕೊಂಡ ಅಧಿಕಾರಿಗಳು ಡಿಎನ್ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಫಯಾಜ್ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಿಸಲು ಅಧಿಕಾರಿಗಳು ನಿಮ್ನೆಯೇ ಕೋರ್ಟ್ ಅನುಮತಿ ಕೋರಿದ್ದರು. ಅದರಂತೆ ಇಂದು ರಕ್ತದ ಮಾದರಿ ಪಡೆದು, ಪರೀಕ್ಷೆಗೆ ಕಳುಹಿಸಿದ್ದಾರೆ. ಒಂದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆರೋಪಿಯನ್ನ ಕರೆತಂದ ಅಧಿಕಾರಿಗಳು ನ್ಯಾಯಾಧೀಶರ ಸಮ್ಮುಖದಲ್ಲಿ ರಕ್ತದ ಮಾದರಿ ಸಂಗ್ರಹಿಸಿದರು. ಬಳಿಕ ನ್ಯಾಯಾಧೀಶರ ಸಮ್ಮುಖದಲ್ಲಿ ಕಿಮ್ಸ್ ವೈದ್ಯರು ಫಯಾಜ್‌ನಿಂದ ರಕ್ತದ ಮಾದರಿ ಪಡೆದ ಬಳಿಕ ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದ್ದಾರೆ. ರಕ್ತದ ಮಾದರಿ ಪಡೆದ ಬಳಿಕ ಫಯಾಜ್ ನನ್ನು ಸಿಐಡಿ ಅಧಿಕಾರಿಗಳು ಮತ್ತೆ ರಹಸ್ಯ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಕೊಲೆಯ ವಿಚಾರದಲ್ಲಿ ಡಿಎನ್ಎ ಪರೀಕ್ಷೆ ಯಾಕೆ ನಡೆಸುತ್ತಾರೆ ಗೊತ್ತಾ..? ನೇಹಾ ಹೀರೇಮಠ ವಿಚಾರದಲ್ಲಿ ಈಗಾಗಲೇ ಎಲ್ಲಾ ಆಯಾಮದಿಂದಾನೂ ತಪಾಸಣೆ ನಡೆಸಲಾಗುತ್ತಿದೆ.‌ ಕೊಲೆಯಾದ ಜಾಗದಲ್ಲಿ ಮಹಜರು ಕೂಡ ಮಾಡಲಾಗಿದೆ. ಅಲ್ಲಿ ಸಿಕ್ಕಿರುವಂತ ಕೂದಲು ಅಥವಾ ಬೇರೆ ಯಾವುದಾದರೂ ವಸ್ತುಗಳು ಸಿಕ್ಕಲ್ಲಿ, ಅದು ಫಯಾಜ್ ದೇನಾ ಎಂಬ ಆಯಾಮದಲ್ಲಿ ಪರೀಕ್ಷೆ ನಡೆಸಲು ಡಿಎನ್ಎ ಟೆಸ್ಟ್ ಮಾಡಿಸಲಾಗುತ್ತದೆ. ಆ ವಸ್ತುಗು ಫಯಾಜ್ ಗೂ ಹೋಲಿಕೆ ಮಾಡಲಾಗುತ್ತದೆ. ಹೀಗಾಗಿ ಡಿಎನ್ಎ ಪರೀಕ್ಷೆ ಮಾಡುವುದಕ್ಕೆ ರಕ್ತ ಸಂಗ್ರಹಣೆ ಮಾಡಿದ್ದಾರೆ. ಸದ್ಯ ಫಯಾಜ್ ನನ್ನು ರಹಸ್ಯ ಸ್ಥಳದಲ್ಲಿಯೇ ಇರಿಸಿ ವಿಚಾರಣೆ ನಡೆಸಲಾಗುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment