Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

---Advertisement---

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ರಾಜ್ಯ ಸರ್ಕಾರಕ್ಕೆ ಯಾರನ್ನೂ ರಕ್ಷಣೆ ಮಾಡುವ ಉದ್ದೇಶವಿಲ್ಲದೆ ಇದ್ದರೆ ತನಿಖೆಯನ್ನು ಸಿಬಿಐಗೆ ವಹಿಸಲಿ ಎಂದೇ ಹೇಳಿದ್ದಾರೆ.

ಇಂದು ನಿರಂಜನ ಹೀರೆಮಠ ಅವರ ಮನೆಗೆ ಭೇಟಿ ನೀಡಿದ ಬಸವರಾಜ್ ಬೊಮ್ಮಾಯಿ ಅವರು ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ನಿರಂಜನ ಕುಟುಂಬಕ್ಕೂ ನಮಗೂ ಹಳೆಯ ಸಂಬಂಧವಿದೆ. ಕಮಡೊಳ್ಳಿಯಲ್ಲಿ ನಿರಂಜನ ಹಿರಿಯರು ನಮ್ಮ ಕುಟುಂಬದ ಗುರುಗಳು. ನೇಹಾ ಹತ್ಯೆ ಬಹಳ ಆಘಾತಕಾರಿಯಾದಂತ ಸಂಗತಿ. ಅಮಾಯಕ ಹೆಣ್ಣು ಮಗುವನ್ನು ಕ್ರೂರವಾಗಿ ಕೊಲೆ ಮಾಡಿರುವುದು ತಲೆ ತಗ್ಗಿಸುವಂತ ಕೆಲಸ. ಕಾಂಗ್ರೆಸ್ ಇಡೀ ಪ್ರಕರಣದ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಈ ಷಡ್ಯಂತ್ರದ ಹಿಂದೆ ಬಹಳಷ್ಟು ಜನ ಇದ್ದಾರೆ ಎಂದು ಈಗಾಗಲೇ ನೇಹಾ ತಂದೆ ತಾಯಿ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕಾದರೆ ಸಿಬಿಐಗೆ ನೀಡಬೇಕು. ಇದು ಅವರ ಕುಟುಂಬಸ್ಥರ ಆಗ್ರಹ ಕೂಡ. ಆದರೆ ರಾಜ್ಯ ಸರ್ಕಾರ ಸಿಐಡಿಗೆ ಕೊಟ್ಟು ಕೈ ತೊಳೆದುಕೊಂಡಿದೆ. ಈ ಪ್ರಕರಣದಲ್ಲಿ ಏನನ್ನು ಮುಚ್ಚಿಡಬಾರದು. ಯಾರನ್ನೂ ರಕ್ಷಿಸಬಾರದು ಎಂಬ ಮನೋಭಾವ ರಾಜ್ಯ ಸರ್ಕಾರಕ್ಕೆ ಇದ್ದರೆ ಪ್ರಕರಣವನ್ನು ಕೂಡಲೇ ಸಿಬಿಐಗೆ ಕೊಡಬೇಕು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment