Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2ನೇ ವಿಮಾನ ನಿಲ್ದಾಣಕ್ಕೆ ಅವಕಾಶ ಕೊಡದಂತೆ ನೆಲಮಂಗಲ ರೈತರಿಂದ ಕುಮಾರಸ್ವಾಮಿಗೆ ಮನವಿ..!

---Advertisement---

ಬೆಂ.ಗಾ: ಬೆಂಗಳೂರಿನ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಎಲ್ಲಿ ನಿರ್ಮಾಣ ಮಾಡಬೇಕು ಎಂಬುದೇ ದಿಡ್ಡ ಚರ್ಚಾ ವಿಷಯವಾಗಿದೆ. ತುಮಕೂರು ಅಥವಾ ನೆಲಮಂಗಲದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಈ ಸಂಬಂಧ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ರೈತರು ಮನವಿ ಮಾಡಿದ್ದಾರೆ.

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡದಂತೆ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು ಎಂದು ಮಾಜಿ ಶಾಸಕ ಡಾ.ಕೆ.ಶ್ರೀನಿವಾಸ ಮೂರ್ತಿ ನೇತೃತ್ವದಲ್ಲಿ ಮನವಿ ಮಾಡಲಾಗಿದೆ. ಕಳೆದ ಎರಡು ತಿಂಗಳಿನಿಂದ ತಾಲೂಕಿನ ರೈತರಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಆತಂಕ ಮನೆ ಮಾಡಿದೆ. ಫಲವತ್ತಾದ ಕೃಷಿ ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ವಿಮಾನ ನಿಲ್ದಾಣವನ್ನು ನಿರ್ಮಿಸದಂತೆ ಹೋರಾಟಗಳು ನಡೆಯುತ್ತಿವೆ. ಆದ್ದರಿಂದ ಈ ಭಾಗದಲ್ಲಿ ಯಾವುದೇ ಕಾರಣಕ್ಕೂ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅವಕಾಶವನ್ನು ನೀಡದಂತೆ ಕೇಂದ್ರ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಮನವಿ ನೀಡಿದ್ದೇವೆ. ಆದಷ್ಟು ಬೇಗ ಕೇಂದ್ರದ ಗಮನಕ್ಕೆ ತಂದು ರೈತರ ಪರವಾಗಿ ನಿಲ್ಲುವುದಾಗಿ ಅವರು ಭರವಸೆಯನ್ನು ನೀಡಿದ್ದಾರೆ ಎಂದಿದ್ದಾರೆ.

ಅಭಿವೃದ್ಧಿ ಹೆಸರಲ್ಲಿ ರೈತರ ಬೆನ್ನಯ ಮುರಿಯುವುದು ಸರಿಯಲ್ಲ. ಕೃಷಿ ಭೂಮಿಯನ್ನು ಅಭಿವೃದ್ಧಿ ಪಡಿಸುವ ಯೋಜನೆಗಳನ್ನು ಜಾರಿಗೆ ತರಬೇಕು‌. ದಿನೇ ದಿನೇ ರೈತರ ಸಂಖ್ಯೆ ಇಳಿಮುಖವಾಗುತ್ತಿದೆ. ಇದು ಹೀಗೆ ಮುಂದುವರೆದರೆ ತಿನ್ನುವ ಅನ್ನಕ್ಕೂ ಪರದಾಡಬೇಕಾಗಲಿದೆ. ರೈತರ ಭೂಮಿಯನ್ನು ಬಿಟ್ಟು ಬರಡು ಭೂಮಿಗಳಲ್ಲಿ ಕೈಗಾರಿಕೆ ಹಾಗೂ ವಿಮಾನ ನಿಲ್ದಾಣ ನಿರ್ಮಾಣ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment