ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕಾಲೇಜಿನಲ್ಲಿ ಬಡ್ತಿ ಪಡೆಯುವ ಉದ್ದೇಶದಿಂದ ಮಾಜಿ ಶಾಸಕರ ಪತ್ನಿಯೊಬ್ಬರು ಸುಳ್ಳು ಜಾತಿ ಪ್ರಮಾಣ ಸೃಷ್ಟಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಡಾ. ಸುಜಾತ ಕೆ ಶ್ರೀಧರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಡಾ. ಸುಜಾತ,ನೆಲಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ. ಕೆ ಶ್ರೀನಿವಾಸ ಮೂರ್ತಿ ಅವರ ಪತ್ನಿ. ಅವರ ರಾಜಕೀಯ ಪ್ರಭಾವ ಬಳಸಿ ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಡಾ. ಸುಜಾತ ಅವರು ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಅದೇ ಕಾಲೇಜಿನಲ್ಲಿ ಡಾ. ಜಿ ಎನ್ ಶಕುಂತಲಾ ಎಂಬುವವರು ಕೂಡ ಕೆಲಸ ಮಾಡುತ್ತಿದ್ದಾರೆ. ಶಕುಂತಲಾ ಅವರಿಗೆ ಬಡ್ತಿ ಸಿಕ್ಕಿದೆ. ಆದರೆ ತಮ್ಮ ಪ್ರಭಾವ ಬಳಸಿ ಶ್ರೀನಿವಾಸ ಮೂರ್ತಿಯವರು, ತಮ್ಮ ಪತ್ನಿಗೆ ಬಡ್ತಿ ಕೊಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಸಂಬಂಧ ದೂರು ದಾಖಲಿಸಿರುವ ಶಕುಂತಲಾ ಅವರು, ಸುಳ್ಳು ಜಾತಿ ಪ್ರಮಾಣ ಪತ್ರ ನಿಒಡಿರುವ ಸುಜಾತ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ, ಪೊಲೀಸ್ ಅಧೀಕ್ಷಕ ಹೆಚ್ ಡಿ ಆನಂದ್ ಕುಮಾರ್ ಅವರಿಗೆ ದೂರು ನೀಡಿದ್ದಾರೆ. ಮಾಜಿ ಶಾಸಕ ಶ್ರೀನಿವಾಸ ಮೂರ್ತಿ ದ್ರಾವಿಡ ಸಮುದಾಯಕ್ಕೆ ಸೇರಿದ್ದಾರೆ. ಸುಜಾತ ಅವರು ಎಳವ ಜಾತಿಗೆ ಸೇರಿದವರು. ಆದರೆ ತನ್ನ ಪತಿಯ ಪ್ರಭಾವ ಬಳಸಿ ದ್ರಾವಿಡ ಜಾತಿ ಪ್ರಮಾಣ ಪತ್ರವನ್ನು ಪಡೆದಿದ್ದಾರೆ. ಮಕ್ಕಳಿಗೆ ತಂದೆಯ ಜಾತಿ ಅನ್ವಯಿಸುತ್ತದೆ. ಇದಕ್ಕೆ ನ್ಯಾಯ ಕೊಡಿಸಿ ಎಂದು ದೂರು ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್