Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಯದಿಂದ ಭಕ್ತಿ, ಜ್ಞಾನ, ವೈರಾಗ್ಯ : ಶತಾಯುಷಿ ಹೊನ್ನೂರ್ ಸಾಬ್

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟಂಬರ್. 08 : ಭಯದಿಂದ ಭಕ್ತಿ ಉದಯಿಸುತ್ತದೆ. ಭಕ್ತಿಯಿಂದ ಜ್ಞಾನ ಸಿದ್ದಿಯಾಗುತ್ತದೆ. ಜ್ಞಾನದಿಂದ ವೈರಾಗ್ಯ ಉಂಟಾಗಿ ಈ ಬದುಕನ್ನು ಸಾರ್ಥಕಗೊಳಿಸುತ್ತದೆ ಎಂದು ಶತಾಯುಷಿ, ಸಂಸ್ಕ್ರತಿ ಚಿಂತಕ, ನಿವೃತ್ತ ಶಿಕ್ಷಕ ಹೊನ್ನೂರುಸಾಬ್ ತಿಳಿಸಿದರು.

ಅವರು ತಾಲ್ಲೂಕಿನ ಭರಮಸಾಗರ ಹೋಬಳಿ ನವಗ್ರಾಮ ನೆಲ್ಲಿಕಟ್ಟೆಯಲ್ಲಿ ಏರ್ಪಡಿಸಿದ್ದ ನೆಲ್ಲಿಕಟ್ಟೆ ಮಾರಕ್ಕಮಾತೆ ಜ್ಞಾನಸಿರಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಹೆತ್ತಹೊತ್ತವರ ಸಾಕುವುದರೊಳಗೆ ಜೀವನ ತೃಪ್ತಿಯಿದೆ. ಅಂತಹ ಸಂತೃಪ್ತ ಜೀವನ ಮಾರಕ್ಕಮಾತೆಯ ಮಕ್ಕಳದು. ಆ ಮಹಾತಾಯಿಯ ಹೆಸರನ್ನು ಚಿರಾಯುವಾಗಿಸಲಾಗಿದೆ ಎಂದರು.

ನೆಲ್ಲಿಕಟ್ಟೆ ಮಾರಕ್ಕ ಮಾತೆ ಸಂಗೀತ ಸಿರಿ ಪ್ರಶಸ್ತಿಯನ್ನು ಅನನ್ಯಕಲಾವಿದ ಬಸವರಾಜ್ ಹುಲ್ಲೆಹಾಳು ಅವರಿಗೆ ಪ್ರದಾನ ಮಾಡಿದ ಯುಗ ಧರ್ಮ ರಾಮಣ್ಣ ಅವರು ಈ ಲೋಕದ ಸಂಕಟಗಳಿಂದ ಪಾರಾಗಲು ಜನಸೇವೆಯು ಸರಿದಾರಿ ತೋರಿಸುವುದು ಎಂದರು.

ಬೆಳಗಟ್ಟದ ಕರಿಬಸವೇಶ್ವರಜ್ಜಯ್ಯಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಅಮ್ಮಮಹದೇವಮ್ಮ ಅವರು ಅಧ್ಯಕ್ಷತೆ ವಹಿಸಿದ್ದರು. ದಿವ್ಯಸಾನಿದ್ಯ ವಹಿಸಿ ಮಾತಾಡಿದ ಬಸವನಾಗೀದೇವಶರಣರು ಆಶೀರ್ವಾದದ ನುಡಿಗಳ್ಳನ್ನಾಡಿದರು.

ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮುಖ್ಯ ಅತಿಥಿ ಪ್ರಹ್ಲಾದ್ ಜೆ.ನಾಡಿಗ್ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ನವೀನ್ ನಿರೂಪಿಸಿದರು. ಸಿ.ಎಂ.ನೇತ್ರಾವತಿ ವಂದಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...