Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಎಲ್ಲರಿಗೂ ಸಮಾನವಾದ ಅವಕಾಶವಿರುವ ಸಮ ಸಮಾಜವೇ ನೇತಾಜಿಯ ಕನಸಾಗಿತ್ತು : ಡಾ ಜಿ.ಎನ್. ಮಲ್ಲಿಕಾರ್ಜುನಪ್ಪ

---Advertisement---

ಚಿತ್ರದುರ್ಗ, (ಜ.23) : “ಯುವಕರಿಗೆ ಒಳ್ಳೆಯ ಬದುಕನ್ನು ಕೊಡುವುದು, ಜನತೆಗೆ ಒಳ್ಳೆಯ ಭವಿಷ್ಯವನ್ನು ರೂಪಿಸುವುದಕ್ಕಾಗಿಯೇ ಸೈನ್ಯ ಕಟ್ಟಿ, ಸಮವಸ್ತ್ರ ಧರಿಸಿ ಹೋರಾಡಿದವರು ನೇತಾಜಿ” ಎಂದು ನಿವೃತ್ತ ಪ್ರಾಚಾರ್ಯರು ಹಾಗೂ ಪ್ರಗತಿಪರ ಚಿಂತಕರಾದ ಡಾ ಜಿ.ಎನ್. ಮಲ್ಲಿಕಾರ್ಜುನಪ್ಪ ಅಭಿಪ್ರಾಯಪಟ್ಟರು.

ಚಿತ್ರದುರ್ಗದಲ್ಲಿ ಇಂದು ಎಐಡಿವೈಓ ಸಂಘಟನೆಯು ಸಂಘಟಿಸಿದ್ದ ನೇತಾಜಿ ಸುಭಾಷ್‌ಚಂದ್ರ ಬೋಸ್‌ರ 125ನೇ ಜನ್ಮ ವಾರ್ಷಿಕದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

“ಮಹಾನ್ ವ್ಯಕ್ತಿಯೊಬ್ಬನ ಜೀವನವನ್ನು ಅರಿಯುವುದು ಮತ್ತೋರ್ವ ವ್ಯಕ್ತಿಗೆ ಶಿಕ್ಷಣವಾಗುತ್ತದೆ. ಈ ನಿಟ್ಟಿನಲ್ಲಿ ವಿವಿಧ ಸ್ಪರ್ಧೆಗಳ ಮೂಲಕ ನೇತಾಜಿಯವರ ಜೀವನ-ಆದರ್ಶಗಳನ್ನು ಯುವ ಜನತೆಗೆ ಪರಿಚಯ ಮಾಡಿಕೊಡುವಲ್ಲಿ ಎಐಡಿವೈಓ ಸಂಘಟನೆಯ ಈ ಪ್ರಯತ್ನ ಅಭಿನಂದನೀಯ” ಎಂದರು.

ನೇತಾಜಿಯವರ ಜೀವನ ಹೋರಾಟದ ಬಗ್ಗೆ ವಿವರವಾಗಿ ಮಾತನಾಡಿದ ಅವರು, “ಅನ್ಯಾಯ ಅಸತ್ಯದೊಂದಿಗೆ ರಾಜಿ ಮಾಡಿಕೊಳ್ಳುವುದು ದೊಡ್ಡ ಅಪರಾಧ ಎಂದು ನಂಬಿದ ನೇತಾಜಿಯವರು, ವ್ಯಕ್ತಿಯೊಬ್ಬನ ಅವಕಾಶವನ್ನು ಕಿತ್ತುಕೊಳ್ಳುವುದು ಸಹ ಅನ್ಯಾಯವಾಗುತ್ತದೆ. ಎಲ್ಲರಿಗೂ ಸಮಾನವಾದ ಅವಕಾಶವಿರುವ ಸಮ ಸಮಾಜವೇ ನೇತಾಜಿಯ ಕನಸಾಗಿತ್ತು.

ಬ್ರಿಟಿಷರಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೂ ದೇಶವಾಸಿಗಳ ಪರಿಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಆಗಿದೆ. ಶಿಕ್ಷಣ ಉದ್ಯೋಗ ಆರೋಗ್ಯ ಬಡವರ ಪಾಲಿಗೆ ಇಲ್ಲವಾಗಿದೆ. ನೇತಾಜಿಯವರ ಕನಸಿನ ಭಾರತ ಕನಸಾಗಿಯೇ ಉಳಿದಿದೆ. ಅದನ್ನು ನನಸು ಮಾಡುವ ಹೋರಾಟಕ್ಕೆ ನೀವೆಲ್ಲರೂ ಕಿಡಿಗಳಾಗಿ ಹೊರಹೊಮ್ಮಬೇಕು” ಎಂದು ಆಶಿಸಿದರು.

ಮುಖ್ಯ ಭಾಷಣಕಾರರಾಗಿ ಮಾತನಾಡಿದ ಎಐಡಿವೈಓನ ರಾಜ್ಯ ಕಾರ್ಯದರ್ಶಿ, ಸಿದ್ದಲಿಂಗ ಬಾಗೇವಾಡಿ ಅವರು “ರಾಜಕೀಯದಲ್ಲಿ ಧರ್ಮವನ್ನು ಬೆರೆಸಬಾರದು. ಧರ್ಮವು ವ್ಯಕ್ತಿಯೊಬ್ಬನ ವೈಯಕ್ತಿಕ ವಿಷಯವಾಗಿರಬೇಕು ಎಂದು ನಂಬಿದವರು ನೇತಾಜಿ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರನ್ನು ಸಾಮಾಜಿಕ ಜೀವನದಿಂದ ದೂರವಿಡಬೇಕು ಎಂಬುದು ಅವರ ಎಚ್ಚರಿಕೆಯ ಕರೆಯಾಗಿತ್ತು. ಅವರ ವಿಚಾರಧಾರೆಗಳು ವೈಜ್ಞಾನಿಕವಾಗಿದ್ದವು.

ಧರ್ಮ ನಿರಪೇಕ್ಷವಾಗಿದ್ದವು ಮತ್ತು ಜನಪರವಾಗಿದ್ದವು. ಆದರೆ ಅಂದಿನ ದಿನಗಳಲ್ಲಿ ಯಾವ ಶಕ್ತಿಗಳು ನೇತಾಜಿಯವರ ಹೋರಾಟಕ್ಕೆ ಬೆಂಬಲ ಕೊಡಲಿಲ್ಲವೋ, ಅಂಥವರು ಇಂದು ಅವರ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುವ ಮೂಲಕ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿವೆ. ನಾವು ಯುವಕರು ಇಂತಹ ಆಡಂಬರಕ್ಕೆ ಮರುಳಾಗದೆ ನೇತಾಜಿಯವರ ನೈಜ ಉತ್ತರಾಧಿಕಾರಿಗಳಾಗಿ, ಅವರ ಹೋರಾಟದ ಮಾರ್ಗವನ್ನು ಅನುಸರಿಸಿ ಇಂದು ನಮ್ಮ ಕಣ್ಣೆದುರು ನಡೆಯುತ್ತಿರುವ ಅನ್ಯಾಯ,  ಭ್ರಷ್ಟಾಚಾರ, ನಿರುದ್ಯೋಗಗಳ ವಿರುದ್ಧ ಹೋರಾಡಬೇಕು” ಎಂದು ಕರೆ ನೀಡಿದರು.

ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ಜಿಲ್ಲಾ ಮುಖಂಡರಾದ ರವಿಕುಮಾರ್ ಮಾತನಾಡಿ “ಇಂದು ದೇಶದ ಅಭಿವೃದ್ಧಿಯ ಬಗ್ಗೆ ಉದ್ಧಾನುದ್ಧ ಭಾಷಣ ಮಾಡುವ ರಾಜಕೀಯ ನಾಯಕರು ಕಾರ್ಮಿಕರನ್ನು ಪುಡಿಗಾಸಿಗೆ ದುಡಿಸಿಕೊಂಡು ಸಮಾನತೆ ಎಂಬ ಪದಕ್ಕೆ ಅವಮಾನ ಮಾಡುತ್ತಿದ್ದಾರೆ. ತಮಗೆ ಲಾಭವಿರುವ ಕಾಮಗಾರಿಗಳನ್ನು ಮಾತ್ರ ಕೈಗೆತ್ತಿಕೊಂಡು ಜನತೆಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಕೈ ಬಿಡುವ ಪರಿಪಾಠ ಸರ್ವೇಸಾಮಾನ್ಯವಾಗಿದೆ.

ದೇಶದ ಬಜೆಟ್‌ನ ಮೊತ್ತಕ್ಕಿಂತಲೂ ಅಧಿಕ ಆಸ್ತಿಯುಳ್ಳ ದೊಡ್ಡ ಬಂಡವಾಳಗಾರರು ಮತ್ತು ಬಿಲ್ಡರ್ಸ್ಗಳನ್ನು ಮಾತ್ರ ಬೆಳೆಸುತ್ತಿರುವ ಇಂದಿನ ವ್ಯವಸ್ಥೆಯನ್ನು ಮೂಲಭೂತವಾಗಿ ಬದಲಾಯಿಸಿ, ನೇತಾಜಿಯ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿಯನ್ನು ಇಂದಿನ ಯುವ ಜನತೆ ಕೈಗೆತ್ತಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಈ ಸಂಘಟನೆಯ ಪ್ರಯತ್ನಗಳನ್ನು ಬೆಂಬಲಿಸಬೇಕು” ಎಂದರು.
ಕಾರ್ಯಕ್ರಮದಲ್ಲಿ ಗಾಯನ ತಂಡದಿಂದ ಹೋರಾಟದ ಗೀತೆಗಳನ್ನು ಹಾಡಲಾಯಿತು.

ನೇತಾಜಿಯವರ ಜೀವನ-ಆದರ್ಶಕೆ ಸಂಬಂಧಪಟ್ಟ ಸೂಕ್ತಿ ಮತ್ತು ಛಾಯಾಚಿತ್ರ ಪ್ರದರ್ಶನ ಹಾಗೂ ಪುಸ್ತಕ ಮಾರಾಟ ಹಮ್ಮಿಕೊಳ್ಳಲಾಗಿತ್ತು. ಕೊನೆಯಲ್ಲಿ ನೇತಾಜಿ ಜನ್ಮ ವಾರ್ಷಿಕದ ಅಂಗವಾಗಿ ಹಮ್ಮಿಕೊಂಡ ಸಾಂಸ್ಕತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ನಗರದ ವಿವಿಧ ಕಾಲೇಜುಗಳ ಪ್ರತಿನಿಧಿಗಳು, ಸಂಘಟನೆಯ ಬೆಂಬಲಿಗರು ಮತ್ತು ನಾಗರಿಕರು ಪಾಲ್ಗೊಂಡಿದ್ದರು. ಎಐಡಿವೈಓ ಸಂಘಟನೆಯ ಜಿಲ್ಲಾ ಸಮಿತಿ ಸದಸ್ಯರಾದ ನಿಂಗರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ವಿನಯ್, ಸದಸ್ಯರಾದ ಪ್ರಸನ್ನ, ಜಗದೀಶ್, ಮುತ್ತುರಾಜ್, ಸುರೇಶ್, ಮಂಜುನಾಥ ದಿನೇಶ್, ಆನಂದ, ರೂಪ, ಅರ್ಪಿತ, ನಿರ್ಮಲ ಮೊದಲಾದವರು ಕಾರ್ಯಕ್ರಮದ ನೇತೃತ್ವವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...