ಬೆಂಗಳೂರು: ‘ಪಡ್ಡೆಹುಲಿ’ ಚಿತ್ರದ ಮೂಲಕ ಕನ್ನಡಿಗರ ಮನಗೆದ್ದಿದ್ದ ಯುವ ನಟ ಶ್ರೇಯಸ್ ಮಂಜು ಈಗ ಮತ್ತೊಂದು ಖಡಕ್ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಾಗಿದ್ದಾರೆ. ಅವರ ನಟನೆಯ ಬಹುನಿರೀಕ್ಷಿತ ‘ದಿಲ್ದಾರ್’ ಸಿನಿಮಾದ ಫಸ್ಟ್ ಲುಕ್ ಟೀಸರ್ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.
ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ಶ್ರೇಯಸ್ ಮಂಜು ಈ ಹಿಂದೆಂದೂ ಕಾಣಿಸಿಕೊಳ್ಳದ ರಗಡ್ ಆಕ್ಷನ್ ಲುಕ್ನಲ್ಲಿ ಅಬ್ಬರಿಸಿದ್ದಾರೆ. ಈಗಾಗಲೇ ಮಾಸ್ ಪಾತ್ರಗಳ ಮೂಲಕ ಭರವಸೆ ಮೂಡಿಸಿರುವ ಶ್ರೇಯಸ್, ಈ ಚಿತ್ರದ ಮೂಲಕ ತಮ್ಮ ಮಾಸ್ ಇಮೇಜ್ ಅನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ಮುನ್ಸೂಚನೆಯನ್ನು ಟೀಸರ್ ಮೂಲಕ ನೀಡಿದ್ದಾರೆ.
ಏನ್ಸಿಯಂಟ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಆರ್. ಸಂತೋಷ್ ಕುಮಾರ್ (ಎಸ್ವಿಟಿ) ಅವರು ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಹರೇಕೃಷ್ಣ ರೆಡ್ಡಿ ಎಸ್. ಅವರು ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಜವಾಬ್ದಾರಿ ನಿಭಾಯಿಸಿದ್ದಾರೆ. ಪ್ರಸ್ತುತ ಚಿತ್ರೀಕರಣದ ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಮುಗಿಸಿಕೊಂಡಿರುವ ‘ದಿಲ್ದಾರ್’ ತಂಡ, ಬಿಡುಗಡೆಯ ಹೊಸ್ತಿಲಲ್ಲಿದೆ. ಪ್ರಚಾರದ ಮೊದಲ ಹೆಜ್ಜೆಯಾಗಿ ಬಿಡುಗಡೆ ಮಾಡಲಾಗಿರುವ ಫಸ್ಟ್ ಲುಕ್ ಟೀಸರ್ ಸಿನಿರಸಿಕರಲ್ಲಿ ಕುತೂಹಲ ಮೂಡಿಸಿದೆ.
ಚಿತ್ರತಂಡ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಇದು ಕೇವಲ ರಕ್ತಸಿಕ್ತ ಆಕ್ಷನ್ ಸಿನಿಮಾವಲ್ಲ, ಬದಲಿಗೆ ಒಂದು ವಿಭಿನ್ನವಾದ ಪ್ರೇಮಕಥೆಯನ್ನು ಹೊಂದಿರುವ ಪಕ್ಕಾ ಕಮರ್ಷಿಯಲ್ ಎಂಟರ್ಟೈನರ್ ಚಿತ್ರವಾಗಿದೆ.
ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಹೊಸ ನಾಯಕಿಯ ಎಂಟ್ರಿಯಾಗಿದೆ. ಕನ್ನಡದ ಖ್ಯಾತ ನಟ ಶರಣ್ ಅವರ ತಂಗಿ ಮಗಳಾದ ಕೀರ್ತಿ ಕೃಷ್ಣ ‘ದಿಲ್ದಾರ್’ ಮೂಲಕ ಕಥಾನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಇನ್ನು ಚಿತ್ರದಲ್ಲಿ ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಮತ್ತು ಚಿಲ್ಲರ್ ಮಂಜು ಅವರನ್ನೊಳಗೊಂಡ ದೊಡ್ಡ ಹಾಸ್ಯ ಕಲಾವಿದರ ದಂಡೇ ಇದ್ದು, ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡುವ ಭರವಸೆ ಮೂಡಿಸಿದೆ.
ಖಳನಾಯಕರ ಪಾತ್ರದಲ್ಲಿ ‘ಕೆಜಿಎಫ್’ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ ಮತ್ತು ಅರ್ಪಿತ್ ಅಬ್ಬರಿಸಲಿದ್ದಾರೆ. ಸದ್ಯ ಟೀಸರ್ ಮೂಲಕ ಧೂಳೆಬ್ಬಿಸಿರುವ ‘ದಿಲ್ದಾರ್’ ಚಿತ್ರತಂಡ, ಶೀಘ್ರದಲ್ಲೇ ಸಿನಿಮಾದ ಬಿಡುಗಡೆ ದಿನಾಂಕ ಹಾಗೂ ಮತ್ತಷ್ಟು ಆಸಕ್ತಿದಾಯಕ ಮಾಹಿತಿಗಳೊಂದಿಗೆ ಪ್ರೇಕ್ಷಕರ ಮುಂದೆ ಬರಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








