Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿನಿಂದ ನೂತನ ವಿದ್ಯುತ್ ದರ ಜಾರಿ

Facebook
Twitter
Telegram
WhatsApp

 

ಬೆಂಗಳೂರು: ಹೊಸ ಹಣಕಾಸು ವರ್ಷ ಇಂದಿನಿಂದ ಪ್ರಾರಂಭವಾಗಿದೆ. ಹೀಗಾಗಿ ಕೆಲವು ವ್ಯವಹಾರಗಳ ರೀತಿ-ನೀತಿಯೂ ಬದಲಾವಣೆಯಾಗಲಿದೆ. ಅದರಲ್ಲೂ ವಿದ್ಯುತ್ ವಿಚಾರವಾಗಿ ಹಣಕಾಸು ವರ್ಷದ ಆರಂಭದಲ್ಲೇ ಗುಡ್ ನ್ಯೂಸ್ ಸಿಕ್ಕಿದೆ. ವಿದ್ಯುತ್ ದರ ಕಡಿತಗೊಂಡಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವೂ ವಿದ್ಯುತ್ ದರವನ್ನು ಪರಿಷ್ಕರಣೆ ಮಾಡಿದ್ದು, ಇಂದಿನಿಂದ ನೂತನ ದರ ಜಾರಿಗೆ ಬರಲಿದೆ.

100 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ 1 ರೂಪಾಯಿ 10 ಪೈಸೆಯನ್ನು ಕಡಿತ ಮಾಡುವುದಾಗಿ ತಿಳಿಸಿದೆ. 2024-25ನೇ ಸಾಲಿಗೆ ಅನ್ವಯವಾಗುವಂತೆ ಕೆಇಆರ್ಸಿ ಆದೇಶದಲ್ಲಿ ತಿಳಿಸಲಾಗಿದೆ. ಎಲ್ಲಾ ಎಸ್ಕಾಂಗಳಲ್ಲೂ ಏಕರೂಪದ ದರ ಜಾರಿಗೆ ಬಂದಿದೆ.

ಅದರಲ್ಲೂ 15 ವರ್ಷಗಳ ಬಳಿಕ ವಿದ್ಯುತ್ ದರ ಕಡಿತವಾಗಿದೆ. ಮುಂದಿನ ತಿಂಗಳ ಬಿಲ್ ನಲ್ಲಿ ದರ ಪರಿಷ್ಕರಣೆಯಾಗಿ ಬರಲಿದೆ. ಈ ಹಿಂದೆ ಯೂನಿಟ್ ಗೆ 0-100 ವರೆಗೆ 4.75 ಪೈಸೆ ಇತ್ತು. 100ರ ಮೇಲಿನ ಬಳಕೆಯ ಪ್ರತಿ ಯುನಿಟ್ ಗೆ 7 ರೂಪಾಯಿ ಇತ್ತು. ಇಂದಿನಿಂದ 100 ಯುನಿಟ್ ಮೇಲಿನ ಬಳಕೆ ದಾರರ ಪ್ರತಿ ಯುನಿಟ್ ಗೆ 5.90 ರೂಪಾಯಿ ಮಾತ್ರ ಪಾವತಿ ಮಾಡಬೇಕು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೃಹಜ್ಯೋತಿ ಯೋಜನೆಯ ಮೂಲಕ ವಿದ್ಯುತ್ ಉಚಿತ ಅಂತ ಘೋಷಣೆ ಮಾಡಿತ್ತು. ಅದರಂತೆ ಈಗಾಗಲೇ ಕೆಲ ತಿಂಗಳಿನಿಂದ 100 ಯೂನಿಟ್ ವಿದ್ಯುತ್ ಅನ್ನು ಗೃಹಜ್ಯೋತಿ ಮೂಲಕ ಉಚಿತವಾಗಿಯೇ ನೀಡಲಾಗುತ್ತಿದೆ. ಇದೀಗ ನೂರಕ್ಕೂ ಹೆಚ್ಚು ಯೂನಿಟ್ ಬಳಕೆ ಮಾಡುವವರಿಗೆ ದರ ಕಡಿತದ ಗುಡ್ ನ್ಯೂಸ್ ಅನ್ನು ನೀಡಿದೆ ಸರ್ಕಾರ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!