Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನೂತನ ಸರ್ಕಾರ ರಚನೆ : ಸಚಿವ ಸಂಪುಟ ಸೇರುವ ಸಂಭಾವ್ಯರ ಇಲ್ಲಿದೆ

---Advertisement---

 

ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಗುರುವಾರ ಅಧಿಕೃತ ಹೇಳಿಕೆ ನೀಡಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರ ಹೆಸರನ್ನು ಪಕ್ಷ ಪ್ರಕಟಿಸಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಸಚಿವ ಸಂಪುಟ ಸೇರುವ ಸಂಭಾವ್ಯ ಶಾಸಕರ ಪಟ್ಟಿಯೂ ಹೊರಬಿದ್ದಿದೆ.

ಡಾ. ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಬಿ.ರಾಮಲಿಂಗಾ ರೆಡ್ಡಿ, ರೂಪಾ ಶಶಿಧರ್, ಈಶ್ವರ ಖಂಡ್ರೆ, ಜಮೀರ್ ಅಹಮದ್, ತನ್ವೀರ್ ಸೇಠ್, ಲಕ್ಷ್ಮಣ ಸವದಿ, ಕೃಷ್ಣ ಬೈರೇಗೌಡ ಇವರು ಸಂಭಾವ್ಯ ಸಚಿವರು ಎಂದು ತಿಳಿದು ಬಂದಿದೆ.

ಡಾ. ಜಿ.ಪರಮೇಶ್ವರ್ ಅವರು ಈ ಹಿಂದೆ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಸುದೀರ್ಘ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿದ್ದರಲ್ಲದೆ, ರಾಜ್ಯ ಸರ್ಕಾರದಲ್ಲಿ ಹಲವು ಸಚಿವ ಸ್ಥಾನಗಳನ್ನು ಅಲಂಕರಿಸಿದ್ದರು.

ಮಾಜಿ ಸಂಸದ ಎಂ.ಬಿ.ಪಾಟೀಲ್ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದರು. ಮತ್ತು ಪ್ರಭಾವಿ ಲಿಂಗಾಯತ ನಾಯಕರು. ಇನ್ನು ಕೆಜೆ ಜಾರ್ಜ್ ಪಕ್ಷದ ಹಿರಿಯ ನಾಯಕರಾಗಿದ್ದು,
ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಸರಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರ ಹೆಸರು ಕೂಡಾ ನೂತನ ಸಚಿವರ ಪಟ್ಟಿಯಲ್ಲಿದೆ.

2016ರಲ್ಲಿ ಆಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಐಟಿ, ಬಿಟಿ ಮತ್ತು ಪ್ರವಾಸೋದ್ಯಮ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪ್ರಿಯಾಂಕ್ ಖರ್ಗೆ ಪಾತ್ರರಾಗಿದ್ದರು.ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಪುತ್ರಿ ರೂಪಾ ಶಶಿಧರ್ ಅವರ ಹೆಸರೂ ಕೂಡಾ ನೂತನ ಸಚಿವರ ಪಟ್ಟಿಯಲ್ಲಿ ಇದೆ. ಈಶ್ವರ ಖಂಡ್ರೆ ಅವರು ಈ ಹಿಂದೆ ಸಿದ್ದರಾಮಯ್ಯ ಅವರ ಸಂಪುಟದಲ್ಲಿ 2016 ರಿಂದ 2018 ರವರೆಗೆ ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ತನ್ವೀರ್ ಸೇಠ್ ಅವರು 2016 ರಿಂದ 2018 ರವರೆಗೆ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು.

ಮಾಜಿ ಸಚಿವ ಕೃಷ್ಣ ಬೈರೇಗೌಡ ಅವರ ಹೆಸರೂ ಸಚಿವ ಸ್ಥಾನದ ರೇಸ್ ನಲ್ಲಿದೆ. ಸಿದ್ದರಾಮಯ್ಯ ಸರ್ಕಾರದ ನೂತನ ಸಚಿವರ ಪಟ್ಟಿಯಲ್ಲಿ ಲಕ್ಷ್ಮಣ ಸವದಿ ಅವರ ಹೆಸರೂ ಇದೆ. ಸವದಿ ಈ ಹಿಂದೆ ಬಿಜೆಪಿ ಸರಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment