Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೈಕುಂಠ ಏಕಾದಶಿ ಹಾಗೂ ಮಕರ ಸಂಕ್ರಾಂತಿ ಹಬ್ಬಗಳ ಆಚರಣೆಗೆ ಮಾರ್ಗಸೂಚಿ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ

Facebook
Twitter
Telegram
WhatsApp

ಚಿತ್ರದುರ್ಗ,(ಜನವರಿ.12) : ಕೋವಿಡ್-19 ರೂಪಾಂತರಿ ಓಮಿಕ್ರಾನ್ ವೈರಾಣು ಸೋಂಕು ಹರಡುವಿಕೆಯನ್ನು ತಡೆಗಟ್ಟಲು ವೈಕುಂಠ ಏಕಾದಶಿ ಹಾಗೂ ಮಕರ ಸಂಕ್ರಾಂತಿ ಹಬ್ಬಗಳ ಆಚರಣೆಯಲ್ಲಿ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.

ವೈಕುಂಠ ಏಕಾದಶಿ ಹಾಗೂ ಸಂಕ್ರಾಂತಿ ಹಬ್ಬಗಳ ಪ್ರಯುಕ್ತ ದೇವಾಲಯದ ಶಾಸ್ತ್ರ ಸಂಪ್ರದಾಯದಂತೆ ದೇವಾಲಯಗಳ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜಾ ಕೈಂಕರ್ಯಗಳನ್ನು ನಡೆಸಲು ಅನುಮತಿಸಿದೆ.

ವೈಕುಂಠ ಏಕಾದಶಿ ದಿನದಂದು ಈಗಾಗಲೇ ನಿಗಧಿಪಡಿಸಿರುವಂತೆ ಪೂರ್ಣ ಪ್ರಮಾಣದ ಕೋವಿಡ್-19 ಲಸಿಕೆ ಪಡೆದ 50 ಜನರಿಗೆ ಮಾತ್ರ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸತಕ್ಕದ್ದು. ಯಾವುದೇ ಸೇವೆ ಇತ್ಯಾದಿಗಳಿಗೆ ಅವಕಾಶವಿರುವುದಿಲ್ಲ. ಹಬ್ಬಗಳ ಆಚರಣೆಯ ಸಲುವಾಗಿ ಯಾವುದೇ ರೀತಿಯ ಮೆರವಣಿಗೆ, ಮನೋರಂಜನಾ ಕಾರ್ಯಕ್ರಗಳು ಇತ್ಯಾದಿ ಆಯೋಜಿಸುವಂತಿಲ್ಲ ಎಂದು ಜಿಲ್ಲೆಯಾದ್ಯಂತ ಮಾರ್ಗಸೂಚಿಗಳನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.

ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಉಪಬಂಧಗಳಡಿಯಲ್ಲಿನ ಕಾನೂನು ಕ್ರಮದ ಜೊತೆಗೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ, ಕಾನೂನಿನ ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನಿನ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶದಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!