Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹಜ್ಯೋತಿ ಯೋಜನೆಗೆ ಹೊಸ ರೂಪ: ಉಚಿತ ವಿದ್ಯುತ್ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ಕಡ್ಡಾಯ?

---Advertisement---

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಜ್ಯೋತಿ’ ಯೋಜನೆಯಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆ ಜಾರಿಯಾಗುವ ಸಾಧ್ಯತೆ ಇದೆ. ಉಚಿತ ವಿದ್ಯುತ್ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಿಸುವುದು ಹಾಗೂ ಯೋಜನೆಯ ದುರುಪಯೋಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸರ್ಕಾರವು ಸ್ಮಾರ್ಟ್ ಕಾರ್ಡ್ ಆಧಾರಿತ ಹೊಸ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸಿದೆ.

ಪ್ರಸ್ತುತ ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ಆಧಾರ್ ಕಾರ್ಡ್ ಹಾಗೂ ಆರ್.ಆರ್. ಸಂಖ್ಯೆಯನ್ನು ಆಧರಿಸಿ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ಆದರೆ ಹೊಸ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಫಲಾನುಭವಿಗೂ ವಿಶಿಷ್ಟ ಡಿಜಿಟಲ್ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು. ಈ ಕಾರ್ಡ್‌ನಲ್ಲಿ ಗ್ರಾಹಕರ ವೈಯಕ್ತಿಕ ವಿವರಗಳು, ಆಧಾರ್ ಲಿಂಕ್ ಮಾಹಿತಿ, ಗ್ರಾಹಕ ಐಡಿ ಹಾಗೂ ವಿದ್ಯುತ್ ಸಂಪರ್ಕದ ಮಾಹಿತಿ ಸಂಗ್ರಹವಾಗಿರಲಿದೆ.ಹೊಸ ವ್ಯವಸ್ಥೆಯ ಪ್ರಕಾರ, ಮೀಟರ್ ರೀಡರ್‌ಗಳು ಮನೆಗಳಿಗೆ ಭೇಟಿ ನೀಡಿದಾಗ ಸ್ಮಾರ್ಟ್ ಕಾರ್ಡ್ ಅನ್ನು ಸ್ಕ್ಯಾನ್ ಮಾಡಿ ಬಿಲ್ಲಿಂಗ್ ಪ್ರಕ್ರಿಯೆ ಪೂರ್ಣಗೊಳಿಸಲಿದ್ದಾರೆ. ಇದರಿಂದ ಫಲಾನುಭವಿಗಳ ಮಾಹಿತಿಯನ್ನು ತಕ್ಷಣವೇ ಪರಿಶೀಲಿಸಲು ಸಾಧ್ಯವಾಗಲಿದೆ.

ಸರ್ಕಾರ ಈ ಕ್ರಮ ಕೈಗೊಳ್ಳಲು ಪ್ರಮುಖ ಕಾರಣಗಳಲ್ಲಿ ಯೋಜನೆಯ ದುರುಪಯೋಗ ತಡೆ ಪ್ರಮುಖವಾಗಿದೆ. ಕೆಲವು ಸಂದರ್ಭಗಳಲ್ಲಿ ಒಂದೇ ಆಧಾರ್ ಸಂಖ್ಯೆಯನ್ನು ಬಳಸಿಕೊಂಡು ಅನಧಿಕೃತವಾಗಿ ವಿವಿಧ ಕಡೆಗಳಲ್ಲಿ ಸೌಲಭ್ಯ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದ್ದವು. ಸ್ಮಾರ್ಟ್ ಕಾರ್ಡ್ ವ್ಯವಸ್ಥೆಯಿಂದ ಇಂತಹ ಅಕ್ರಮಗಳಿಗೆ ತಡೆ ಬೀಳುವ ನಿರೀಕ್ಷೆ ಇದೆ.ಇದರ ಜೊತೆಗೆ, ಬಾಡಿಗೆ ಮನೆಗಳಲ್ಲಿ ವಾಸಿಸುವವರಿಗೆ ಉಂಟಾಗುತ್ತಿದ್ದ ಗೃಹಜ್ಯೋತಿ ನೋಂದಣಿ ಹಾಗೂ ಲಿಂಕಿಂಗ್ ಸಮಸ್ಯೆಗಳನ್ನು ಸರಳಗೊಳಿಸಲು ಈ ವ್ಯವಸ್ಥೆ ನೆರವಾಗಲಿದೆ. ಫಲಾನುಭವಿಗಳ ನಿಖರ ಗುರುತಿನ ಮೂಲಕ ಯೋಜನೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಸರ್ಕಾರ ಮುಂದಾಗಿದೆ.

ಸರ್ಕಾರ ಅಧಿಕೃತ ಮಾರ್ಗಸೂಚಿ ಪ್ರಕಟಿಸಿದ ಬಳಿಕ ಫಲಾನುಭವಿಗಳು ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಸ್ಮಾರ್ಟ್ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸುವ ಸಾಧ್ಯತೆ ಇದೆ. ಕಾರ್ಡ್ ಪಡೆಯಲು ಇತ್ತೀಚಿನ ವಿದ್ಯುತ್ ಬಿಲ್, ಆಧಾರ್ ಕಾರ್ಡ್ ಹಾಗೂ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಅಗತ್ಯವಾಗಬಹುದು.ಆದಾಗ್ಯೂ, ಹೊಸ ವ್ಯವಸ್ಥೆಯಿಂದ ಈಗಾಗಲೇ ಗೃಹಜ್ಯೋತಿ ಯೋಜನೆಯ ಲಾಭ ಪಡೆಯುತ್ತಿರುವ ಗ್ರಾಹಕರಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಇದು ಕೇವಲ ಫಲಾನುಭವಿಗಳ ಗುರುತಿನ ಪರಿಶೀಲನೆ ಮತ್ತು ಬಿಲ್ಲಿಂಗ್ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕ ಹಾಗೂ ಡಿಜಿಟಲ್ ರೂಪಕ್ಕೆ ತರುವ ಪ್ರಯತ್ನವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now