Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದರ್ಶನ್ ಬರ್ತ್ ಡೇ ಸಂಭ್ರಮದಲ್ಲಿ ಅನೌನ್ಸ್ ಆಯ್ತು ಹೊಸ ಸಿನಿಮಾ : ಇದು ರಾಮನ ಭಕ್ತ ಹನುಮನ ಕಥೆ

---Advertisement---

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬ. ಅಭಿಮಾನಿಗಳಂತೂ ಕಳೆದ ಒಂದು ವಾರದಿಂದಾನೂ ಮನೆ ಬಳಿ ಬಂದು ದವಸ-ಧಾನ್ಯಗಳನ್ನು ನೀಡುತ್ತಿದ್ದಾರೆ. ಊರಲ್ಲೆಲ್ಲಾ ದರ್ಶನ್ ಅವದ ಪೋಸ್ಟರ್ ಗಳು ರಾರಾಜಿಸುತ್ತಿವೆ. ಇಷ್ಟು ಪ್ರೀತಿ ಕೊಡುವ ಅಭಿಮಾನಿಗಳಿಗೆ ದರ್ಶನ್ ಸಮಯ ಕೊಡದೆ ಇರುತ್ತಾರೆಯೇ. ಇಂದು ಇಡೀ ದಿನ ಅಭಿಮಾನಿಗಳಿಗಾಗಿ ತಮ್ಮ ಸಮಯವನ್ನು ಮೀಸಲಿಟ್ಟಿದ್ದರು ದರ್ಶನ್.

ನಿನ್ನೆ ರಾತ್ರಿಯಿಂದಾನೇ ದರ್ಶನ್ ಮನೆಯ ಬಳಿ ಅಭಿಮಾನಿಗಳ ದಂಡೇ ನೆರೆದಿತ್ತು. ಹನ್ನೆರಡು ಗಂಟೆಯಿಂದಾನು ಶುಭಾಶಯ ತಿಳಿಸಲು ಆರಂಭಸಿದರು. ನಿದ್ದೆ ಇಲ್ಲದೆ ಇದ್ದರು. ಬೆಳಗ್ಗೆಯೂ ದರ್ಶನ್ ಅಭಿಮಾನಿಗಳ ಜೊತೆಗೆ ಕಾಲ ಕಳೆದಿದ್ದಾರೆ. ಇಂದು ವಿಶೇಷ ಗಿಫ್ಟ್ ಎಂಬಂತೆ ಹೊಸ ಸಿನಿಮಾಗಳ ಅನೌನ್ಸ್ ಆಗಿದೆ. ಇರುವ ಸಿನಿಮಾಗಳಿಂದ ಪೋಸ್ಟರ್ ಗಳು ರಿಲೀಸ್ ಆಗಿವೆ. ಡೆವಿಲ್ ಪೋಸ್ಟರ್ ರಿಲೀಸ್ ಮಾಡಲಾಗಿದ್ದು, ಹೊಸ ಸಿನಿಮಾ ಅನೌನ್ಸ್ ಆಗಿದೆ.

ಕೆವಿಎನ್ ಪ್ರೊಡಕ್ಷನ್ ಕಡೆಯಿಂದ ದರ್ಶನ್ ಅವರು ಸಿನಿಮಾ ಮಾಡಲಿದ್ದಾರೆ. ಪ್ರೇಮ್ ಆಕ್ಷನ್ ಕಟ್ ಹೇಳಲಿದ್ದಾರೆ ಎಂಬ ಮಾತು ಇತ್ತು. ಇಂದು ಅದು ಸತ್ಯವಾಗಿದೆ. ದರ್ಶನ್ ಹಾಗೂ ಪ್ರೇಮ್ ಸಿನಿಮಾ ಅನೌನ್ಸ್ ಆಗಿದ್ದು, ಪೋಸ್ಟರ್ ನಲ್ಲಿ ರಾಮನ ಭಕ್ತ ಹನುಮ ಕಥೆ ಹೇಳುವುದಕ್ಕೆ ಹೊರಟಿರುವುದು ಕಾಣುತ್ತಿದೆ. ಕಾಲಿನ ಪೋಸ್ಟರ್ ಅಷ್ಟೇ ರಿಲೀಸ್ ಆಗಿದ್ದು, ಇನ್ಜಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಸದ್ಯ ಕಾಟೇರ ಯಶಸ್ಸಿನಲ್ಲಿರುವ ದರ್ಶನ್, ಡೆವಿಲ್ ಶುರು ಮಾಡಬಹುದು. ಪ್ರೇಮ್ ಅವರು ಕೂಡ ಸದ್ಯ ಕೆಡಿ ಬ್ಯುಸಿಯಲ್ಲಿದ್ದಾರೆ. ಹೀಗಾಗಿ ಹೊಸ ಸಿನಿಮಾದ ಅಪ್ಡೇಟ್ ತಡವಾಗಬಹುದು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...