Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಹೊಸ ರೂಲ್ಸ್: ಈ ಆಹಾರ ಬಳಕೆಗೆ TTD ನಿರ್ಬಂಧ

---Advertisement---

ತಿರುಮಲ, ಆಗಸ್ಟ್ 22: ರಜೆಯ ಹಿನ್ನೆಲೆಯಲ್ಲಿ ತಿರುಮಲದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ದರ್ಶನಕ್ಕಾಗಿ ಭಕ್ತರು ದೀರ್ಘಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಟೋಕನ್ ಇಲ್ಲದೆ ಆಗಮಿಸುವ ಭಕ್ತರಿಗೆ ದರ್ಶನ ಪಡೆಯಲು ಸುಮಾರು 12 ಗಂಟೆಗಳವರೆಗೆ ಸಮಯ ಬೇಕಾಗುತ್ತಿದೆ.ಇದರ ನಡುವೆ ತಿರುಮಲ ತಿರುಪತಿ ದೇವಸ್ಥಾನಂ (TTD) ಭಕ್ತರ ಆರೋಗ್ಯದ ದೃಷ್ಟಿಯಿಂದ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ತಿರುಮಲದಲ್ಲಿರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಫಾಸ್ಟ್‌ಫುಡ್ ಕೇಂದ್ರಗಳಲ್ಲಿ ಕಾಲಿಫ್ಲವರ್‌ (ಗೋಬಿ) ಬಳಸಿ ಆಹಾರ ತಯಾರಿಸುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಇತ್ತೀಚೆಗೆ ಕಾಲಿಫ್ಲವರ್‌ನಲ್ಲಿ ಹುಳುಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಭಕ್ತರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ಆದೇಶದವರೆಗೆ ತಿರುಮಲದಲ್ಲಿ ಗೋಬಿಯನ್ನು ಆಹಾರ ತಯಾರಿಕೆಗೆ ಬಳಸಬಾರದು ಎಂದು TTD ಸೂಚನೆ ನೀಡಿದೆ.TTD ಆರೋಗ್ಯ ವಿಭಾಗದ ಉಪ ಕಾರ್ಯನಿರ್ವಾಹಕ ಅಧಿಕಾರಿ ಸೋಮನ್ನಾರಾಯಣ ಅವರು ತಿರುಮಲದಲ್ಲಿನ ಹೋಟೆಲ್, ರೆಸ್ಟೋರೆಂಟ್ ಮತ್ತು ಫಾಸ್ಟ್‌ಫುಡ್ ಕೇಂದ್ರಗಳ ನಿರ್ವಾಹಕರೊಂದಿಗೆ ಸಭೆ ನಡೆಸಿ ಈ ಕುರಿತು ಸೂಚನೆ ನೀಡಿದ್ದಾರೆ.

ಈಗಾಗಲೇ ತಿರುಮಲದ ಫಾಸ್ಟ್‌ಫುಡ್ ಕೇಂದ್ರಗಳು ಹಾಗೂ ರೆಸ್ಟೋರೆಂಟ್‌ಗಳಲ್ಲಿ ಕೆಲವು ಚೈನೀಸ್ ಮಾದರಿಯ ಅಡುಗೆಗಳ ಮೇಲೂ ನಿರ್ಬಂಧ ಹೇರಲಾಗಿದೆ.ಇದೇ ವೇಳೆ ಶ್ರಾವಣ ಪೂರ್ಣಿಮೆಯ ಅಂಗವಾಗಿ ಆಗಸ್ಟ್ 28ರಂದು ತಿರುಮಲದಲ್ಲಿ ಗರುಡ ಸೇವೆ ನಡೆಯಲಿದೆ. ಸಂಜೆ 7ರಿಂದ ರಾತ್ರಿ 9 ಗಂಟೆಯವರೆಗೆ ಶ್ರೀ ಮಲಯಪ್ಪ ಸ್ವಾಮಿಯವರು ಗರುಡ ವಾಹನದ ಮೇಲೆ ಭಕ್ತರಿಗೆ ದರ್ಶನ ನೀಡಲಿದ್ದಾರೆ.ಮುಂಬರುವ ಬ್ರಹ್ಮೋತ್ಸವದ ಹಿನ್ನೆಲೆಯಲ್ಲಿ TTD ಭದ್ರತೆ, ಮೂಲಸೌಕರ್ಯ ಹಾಗೂ ಭಕ್ತರಿಗೆ ಅಗತ್ಯ ಸೌಲಭ್ಯಗಳ ಕುರಿತು ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ.

ತಿರುಮಲ ಶ್ರೀವಾರಿ ಸಾಲಕಟ್ಲ ಬ್ರಹ್ಮೋತ್ಸವ ಸೆಪ್ಟೆಂಬರ್ 15ರಿಂದ 23ರವರೆಗೆ ನಡೆಯಲಿದೆ. ಸೆಪ್ಟೆಂಬರ್ 14ರಂದು ಶಾಸ್ತ್ರೋಕ್ತ ವಿಧಿವಿಧಾನಗಳೊಂದಿಗೆ ಅಂಕುರಾರ್ಪಣ ಕಾರ್ಯಕ್ರಮ ನಡೆಯಲಿದೆ.
ಬ್ರಹ್ಮೋತ್ಸವದ ಅಂಗವಾಗಿ ಸೆಪ್ಟೆಂಬರ್ 15ರಂದು ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಹಾಗೂ ಅವರ ಪತ್ನಿ ಶ್ರೀವಾರಿ ದೇವರಿಗೆ ರೇಷ್ಮೆ ವಸ್ತ್ರಗಳನ್ನು ಅರ್ಪಿಸುವ ಸಿದ್ಧತೆ ನಡೆಯುತ್ತಿದೆ.
ಬ್ರಹ್ಮೋತ್ಸವದ ವೇಳೆಗೆ ತಿರುಪತಿಯಲ್ಲಿ ಎರಡು ಹೊಸ ವಸತಿ ಸಂಕೀರ್ಣಗಳನ್ನು ಕಾರ್ಯಾರಂಭಗೊಳಿಸಲು TTD ಸಿದ್ಧತೆ ನಡೆಸುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now