Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಸತಿ ನಿಲಯಗಳಿಗೆ ಗುಣಮಟ್ಟದ ಆಹಾರ ನೀಡಲು ಹೊಸ ಟೆಂಡರ್ : ಸಚಿವ ಡಿ. ಸುಧಾಕರ್ ಸೂಚನೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ.16 :  ಜಿಲ್ಲೆಯ ವಸತಿ ನಿಲಯಗಳಿಗೆ ಗುಣಮಟ್ಟದ ಆಹಾರ ಸಾಮಗ್ರಿ ಸರಬರಾಜು, ಪ್ರತಿ ದಿನ ತಾಜಾ ಸೊಪ್ಪು, ತರಕಾರಿ ಖರೀದಿಸುವ ವ್ಯವಸ್ಥೆಯಾಗಬೇಕು. ಇದು ಸಮರ್ಪಕವಾಗಿ ಅನುಷ್ಠಾನವಾಗಬೇಕು. ಈ ಹಿನ್ನಲೆಯಲ್ಲಿ ಹೊಸದಾಗಿ ಟೆಂಡರ್ ಕರೆಯುವಂತೆ ಸಚಿವ ಡಿ. ಸುಧಾಕರ್ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗೆ ಸೂಚನೆ ನೀಡಿದರು.

ಅಧಿಕಾರಿಗಳು ಹಾಸ್ಟೆಲ್‍ಗೆ ತೆರಳಿ ಪರಿಶೀಲಿಸಿ ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿ, ಅವರ ಸಮಸ್ಯೆಗಳು, ದೂರುಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.

ಮಕ್ಕಳ ಊಟದಲ್ಲಿ ರಾಜಕೀಯ ಮಾಡುವಂತಹ ಟೆಂಡರ್‍ದಾರರು ನಮಗೆ ಬೇಡ. ಹೈಕೋರ್ಟ್ ಹೊಸ ಟೆಂಡರ್ ಕರೆಯಲು ತಿಳಿಸಿದೆ. ಹೀಗಾಗಿ ಹೊಸ ಟೆಂಡರ್ ಕರೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದರು. ಹಾಸ್ಟೆಲ್‍ಗೆ ಖುದ್ದು ಭೇಟಿ ನೀಡಲಾಗಿದ್ದು, ತಾಜಾ ತರಕಾರಿ, ಉತ್ತಮ ಆಹಾರ, ಪರಿಕರ ವಿತರಣೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment